Friday, May 1, 2026
Friday, May 1, 2026

ಕೋವಿಡ್ ತೀವ್ರ ಇಳಿಕೆ ಕಾರಣ ‌ನಿರ್ಬಂಧಗಳ ಸಡಿಲಿಕೆ ರಾಜ್ಯಗಳಿಗೆ ಕೇಂದ್ರ ಸೂಚನೆ

Date:

ಕಳೆದ ತಿಂಗಳು ಆತಂಕ ಮೂಡಿಸಿದ್ದ ಕೋವಿಡ್ ಮೂರನೇ ಅಲೆಯು ಅತ್ಯಂತ ವೇಗವಾಗಿ ಇಳಿಕೆಯಾಗುತ್ತಿದೆ. ಜನರು ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಸೋಂಕಿತರ ಸಂಖ್ಯೆ ಸಾವಿರದೊಳಗಿದೆ. ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ. ಪ್ರಸ್ತುತ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,518 ರಷ್ಟಿದೆ. ಈ ತಿಂಗಳ ಅಂತ್ಯಕ್ಕೆ 2 ಸಾವಿರದ ಸಮೀಪ ಬರುವ ನಿರೀಕ್ಷೆ ಇದೆ.

ಸಾವಿನ ಸಂಖ್ಯೆ ಕೂಡ ಸಿಂಗಲ್ ಡಿಜಿಟ್ ಗೆ ಇಳಿಯಲಿದೆ. ಮೂರನೇ ಅಲೆಯಲ್ಲಿ 9.35 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದರು. 1,500 ಜನರು ಸೋಂಕಿನಿಂದ ಮೃತಪಟ್ಟಿದ್ದರು.

ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿರುವ ಕಾರಣದಿಂದ ರಾತ್ರಿ ಕರ್ಫ್ಯೂ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

“ಸಾಮಾಜಿಕ,ಧಾರ್ಮಿಕ, ಮನೋರಂಜನೆ ಕ್ರೀಡೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ನಿರ್ಬಂಧಗಳನ್ನು ಸಡಿಲಗೊಳಿಸಬಹುದು. ಹಾಗಿಯೇ ರಾತ್ರಿ ಕರ್ಫ್ಯೂ ಅವಧಿಯನ್ನು ಕಡಿತ ಮಾಡಬಹುದು. ಸ್ಥಳೀಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಕೈಗೊಳ್ಳಬೇಕು” ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಸಲಹೆ ನೀಡುವ ಮೂಲಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...