Friday, September 27, 2024
Friday, September 27, 2024

Breaking Karnataka News | February 27, 2022

Date:

  • ಬಾಗಲಕೋಟೆಯಲ್ಲಿ ರಾಜ್ಯ ಯುವ ವಿಜ್ಞಾನಿಗಳ ಸಮಾವೇಶFebruary 27, 2022ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರೀಷತ್ ನಿಂದ ಫೆ.27,28ರಂದು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶ ಆಯೋಜಿಸಲಾಗಿದೆ ಎಂದು ಪರಿಷತ್ ಉಪಾಧ್ಯಕ್ಷ ಎಚ್.ಜಿ.ಹುದ್ದಾರ ಅವರು ತಿಳಿಸಿದರು. ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಬಿಎ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಪ್ರತಿ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರು ಯುವ ವಿಜ್ಞಾನಿಗಳು ಸೇರಿದಂತೆ 70 ವಿದ್ಯಾರ್ಥಿಗಳು, ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು. ವಿಜ್ಞಾನ ಆಸಕ್ತರು ಸೇರಿದಂತೆ 200 ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಬಾಗಲಕೋಟೆಯಲ್ಲಿ ಸಮ್ಮೇಳನ … Continue reading
  • ಗೆಲುವಿನತ್ತ ಕರ್ನಾಟಕ ರಣಜಿ ತಂಡFebruary 27, 2022ದ್ವಿತೀಯ ಇನ್ನಿಂಗ್ಸ್ ನಲ್ಲೂ ಬ್ಯಾಟಿಂಗ್ ವೈಭವ ಮುಂದುವರಿಸಿದ ಕರ್ನಾಟಕಕ್ಕೆ ಬೌಲಿಂಗ್ ನಲ್ಲಿ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಭರವಸೆ ತುಂಬಿದರು.ಇದರ ಪರಿಣಾಮ ರಣಜಿ ಕ್ರಿಕೆಟ್ ಟೂರ್ನಿಯ ಎಲೈಟ್ ಸಿ ಗುಂಪಿನ ಪಂದ್ಯದಲ್ಲಿ ತಂಡ ಗೆಲುವಿನತ್ತ ಹೆಜ್ಜೆ ಹಾಕಿತು. ಚೆನ್ನೈನ ಐಐಟಿ ಕೆಮ್ ಪ್ಲಾಸ್ಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಗೆಲುವಿಗೆ ಕರ್ನಾಟಕ 508 ರನ್ ಗಳ ಗುರಿ ನೀಡಿತು. ಮೂರನೇ ದಿನದಾಟದ ಮುಕ್ತಾಯಕ್ಕೆ ಜಮ್ಮು ಮತ್ತು ಕಾಶ್ಮೀರ ನಾಲ್ಕು ವಿಕೆಟ್ ಕಳೆದುಕೊಂಡು 189 … Continue reading
  • ಭಾರತ-ಶ್ರೀಲಂಕಾ ಕ್ರಿಕೆಟ್ ಟಿ -20 ಸರಣಿ ಭಾರತ ಕೈವಶFebruary 27, 2022ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕ ಮತ್ತು ಆಲ್-ರೌಂಡರ್ ರವೀಂದ್ರ ಜಡೇಜಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಬಲದಿಂದ ಮಿಂಚಿದ ಭಾರತ ತಂಡ ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ವಶಪಡಿಸಿಕೊಂಡಿತು. ಟೀಮ್ ಇಂಡಿಯಾ ಪಾಲಿಗೆ ಇದು ಸತತ 11ನೇ ಟಿ-20 ಗೆಲುವಾಗಿದೆ. ಧರ್ಮಶಾಲಾ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ … Continue reading
  • ಪ.ಜಾತಿ/ಪ.ವರ್ಗಗಳಿಗೆ ಮೀಸಲಾಗಿಟ್ಟ ಹಣ ಪುನಃ ಸರ್ಕಾರದ ಪಾಲಾಗುತ್ತಿದೆFebruary 27, 2022ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಅನುದಾನ ಹಂಚಿಕೆ ಕಾಯ್ದೆಯಲ್ಲಿನ 7 ಡಿ ಸೆಕ್ಷನ್ ಅನ್ನೋದು ಪಡಿಸಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಈ ತಿದ್ದುಪಡಿಯಿಂದ ಪರಿಶಿಷ್ಟ ಜಾತಿ, ಪಂಗಡದ ಜನರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಲಿಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಎಸ್ ಸಿ ಪಿ, ಟಿ ಎಸ್ ಪಿ ಕಾಯ್ದೆ ಅಡಿ ಮೀಸಲಿಟ್ಟ ಹಣ ಹಲವು ಇಲಾಖೆಗಳಲ್ಲಿ ಖರ್ಚಾಗುವುದಿಲ್ಲ. ಈ … Continue reading
  • ಮೇಕೆದಾಟಿನತ್ತ ಕಾಂಗ್ರೆಸ್ ಜನತೆಯತ್ತ ಬಿಜೆಪಿFebruary 27, 2022ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ 2.0 ಅನ್ನು ಭಾನುವಾರದಿಂದ ಆರಂಭಿಸಲಿದೆ. ಇದೇ ವೇಳೆ ಕಾಂಗ್ರೆಸ್ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಭಾನುವಾರ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ರಸ್ತೆಗಿಳಿದು ಹೋರಾಟಕ್ಕೆ ಸಜ್ಜಾಗಿದೆ. ಇದರೊಂದಿಗೆ ಎರಡು ಪ್ರಧಾನ ಪಕ್ಷಗಳು ಪರಸ್ಪರ ಕದನಕ್ಕೆ ಇಳಿದಂತಾಗಿದೆ. ಮೇಕೆದಾಟು ಪಾದಯಾತ್ರೆಯ ಮೊದಲ ಹಂತ ಸುಗಮ ದಿಂದ ರಾಮನಗರದ ವರೆಗೆ ನಾಲ್ಕು ದಿನ ನಡೆದಿದೆ. ಬಳಿಕ ಕೋರ್ಟ್ ಸೂಚನೆ ಮೇರೆಗೆ ನಿಲ್ಲಿಸಲಾಗಿತ್ತು. ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು … Continue reading
  • ದೇಶಬಿಟ್ಟು ಹೋಗಿಲ್ಲ- ಝೆಲೆನ್ಸ್ಕಿFebruary 27, 2022ರಷ್ಯಾ ಸೇನಾ ಪಡೆಗಳ ಘೋರ ದಾಳಿಯ ನಡುವೆಯೂ ಕದನ ಭೂಮಿಯಲ್ಲಿ ಎದೆಸೆಟೆಸಿ ನಿಂತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೊಲೆನ್ ಸ್ಕಿ , ನಾನು ತಾಯ್ನಾಡಿನಲ್ಲಿ ಇದ್ದೇನೆ. ಇಲ್ಲಿಂದ ಪಲಾಯನ ಮಾಡುವುದು ನನಗೆ ಇಷ್ಟವಿಲ್ಲ. ಯಾರು ನೀಡುವ ರಕ್ಷಣೆ ಅಗತ್ಯ ಬೇಕಿಲ್ಲ. ನನಗೆ ಸದ್ಯ ಬೇಕಿರುವುದು ಮದ್ದುಗುಂಡುಗಳ ನೆರವು ಎಂದು ಹೇಳಿದ್ದಾರೆ. ರಾಜಧಾನಿ ಕೀವ್ ನಗರದಲ್ಲಿ ಇರುವ ಝೆಲೆನ್ ಸ್ಕಿ ಅವರಿಗೆ ಆಪತ್ತು ಎದುರಾಗಿದೆ. ಹೆಚ್ಚು ಕಾಲ ಅಲ್ಲಿರುವುದು ಕ್ಷೇಮವಲ್ಲ. ಸುರಕ್ಷಿತ ನೆಲೆಗೆ ಬಂದು ಬಿಡಿ. ನಾವು ನೆರವು … Continue reading
  • ರೇಷ್ಮೆ ತಯಾರಿಕೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಲಿದೆFebruary 27, 2022ದೇಶದಲ್ಲಿ ರೇಷ್ಮೆಇಂಡಸ್ಟ್ರಿಯು ವರ್ಷಕ್ಕೆ ಒಂದು ಲಕ್ಷ ಕೋಟಿ ವ್ಯವಹರಿಸುತ್ತಾ ಪ್ರಮುಖ ಉದ್ಯಮಗಳಲ್ಲಿ ಒಂದಾಗಿ ಹೊರಹೊಮ್ಮಿರುವುದು ಸಂತಸದ ಸಂಗತಿ ಎಂದು ಬೆಂಗಳೂರು ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸುಭಾಷ ವಿ. ನಾಯಿಕ ಅವರು ತಿಳಿಸಿದ್ದಾರೆ. ವಿಶ್ವದ 20 ದೇಶಗಳಲ್ಲಿ ಚೀನಾ ಮೊದಲ ಸ್ಥಾನ ಹಾಗೂ ಭಾರತವು ಎರಡನೇ ಸ್ಥಾನ ಪಡೆದಿದೆ. ಇತ್ತೀಚಿಗೆ ಚೀನಾ ರೇಷ್ಮೆ ತಯಾರಿಕೆಯಲ್ಲಿ ಹಿಂದಿದೆ. ಭಾರತವು ಮುನ್ನುಗ್ಗಿ ಮೊದಲ ಸ್ಥಾನ ಪಡೆಯುವ ಸನಿಹದಲ್ಲಿದೆ. ದೇಶವು 35 ಸಾವಿರ ಮೆಟ್ರಿಕ್ ಟನ್ ರೇಷ್ಮೆ … Continue reading
  • ರಾಜ್ಯ ರಾಜಕಾರಣದ ಧ್ರುವ ತಾರೆ ಬಿ.ಎಸ್ ಯಡಿಯೂರಪ್ಪFebruary 27, 2022ಬಿ.ಎಸ್. ಯಡಿಯೂರಪ್ಪನವರ ಪೂರ್ಣ ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ.ಇವರು ಫೆ. 27, 1943ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜಿಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ನಾಮಕರಣ ಮಾಡಲಾಗಿದೆ. ಇವರ ತಂದೆ ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪನವರಿಗೆ ನಾಲ್ಕು ವರ್ಷವಿರುವಾಗಲೇ ತಾಯಿ ವಿಧಿವಶರಾದರು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ. 1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜೀನಾಮೆ … Continue reading
  • ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆFebruary 27, 2022ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಲಾಗಿದೆ. ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ. ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ … Continue reading
  • ವಿವಿಧ ತಾಣಗಳಿಂದ ಭಾರತೀಯರ ಏರ್ ಲಿಫ್ಟ್February 27, 2022ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಯ ಭಾಗವಾಗಿ 219 ವಿದ್ಯಾರ್ಥಿಗಳು ಶನಿವಾರ ಸಂಜೆ ಮುಂಬೈ ತಲುಪಿದ್ದಾರೆ. ರೊಮೇನಿಯಾ ಮೂಲಕ ಇವರನ್ನು ಏರ್ ಇಂಡಿಯಾ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಲಾಯಿತು ಎಂದು ತಿಳಿದುಬಂದಿದೆ. ಸಂಜೆ 7.30ರ ವೇಳೆಗೆ ವಿಮಾನ ಮುಂಬೈ ತಲುಪಿದೆ. ದಿಲ್ಲಿಯಿಂದ ರೊಮೇನಿಯಾಗೆ ತೆರಳಬೇಕಿದ್ದ ಮತ್ತೊಂದು ವಿಮಾನಕ್ಕೆ ಅನುಮತಿ ಸಿಕ್ಕಿಲ್ಲವೆಂದು ತಿಳಿದುಬಂದಿದೆ. ಶನಿವಾರ ಉಕ್ರೇನ್ ನಿಂದ ಜಹೋನಿ ಕ್ರಾಸಿಂಗ್ ಪಾಯಿಂಟ್ ಮೂಲಕ ಭಾರತೀಯ ವಿದ್ಯಾರ್ಥಿಗಳ ಮೊದಲ ಬ್ಯಾಚ್ ಹಂಗೇರಿ ಯನ್ನು ಪ್ರವೇಶಿಸಿದೆ. ವಿಮಾನದ … Continue reading

Book Your Advertisement Now in Breaking Karnataka News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Breaking Karnataka News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...

Shivaganga Yoga Centre ಸಾಧಕರನ್ನು ಗೌರವಿಸಿದಾಗ ಸಂಸ್ಥೆಯ ಹಿರಿಮೆ ವೃದ್ಧಿ

Shivaganga Yoga Centre ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಸೇವೆ...