Tuesday, August 25, 2026
Tuesday, August 25, 2026

ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಚಿಂತನೆ

Date:

ರಾಜ್ಯದಲ್ಲಿನ ಹಿಂದೂ ದೇವಾಲಯಗಳನ್ನು ಸರಕಾರ ನಿಯಂತ್ರಣದಿಂದ ಮುಕ್ತಗೊಳಿಸುವ ನಿಲುವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಧಾರ್ಮಿಕ ಮುಖಂಡರು ಸೇರಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ವಿ.ವಿ. ಪುರಂನ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ರಾಷ್ಟ್ರ ಧರ್ಮ ಸಂಘಟನೆಯು ಸಭೆಯನ್ನು ಆಯೋಜಿಸಿತ್ತು. ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ನೇತೃತ್ವದಲ್ಲಿ ಸಭೆ ನಡೆಯಿತು.
ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮಿ, ಶ್ರೀ ವಾಸವಿ ಪೀಠಾಧ್ಯಕ್ಷರಾದ ಶ್ರೀ ಸಚ್ಚಿದಾನಂದ ಸ್ವಾಮಿ ಪಾಲ್ಗೊಂಡಿದ್ದರು.

ಧಾರ್ಮಿಕ ದತ್ತಿ ಇಲಾಖೆಯ ಮಾಜಿ ಆಯುಕ್ತ ನಂದಕುಮಾರ್, ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಸುರೇಂದ್ರ ಹೆಗಡೆ, ತಿರುಮಲ ತಿರುಪತಿ ದೇವಾಲಯ ಆಡಳಿತ ಮಂಡಳಿ ಸದಸ್ಯ ಶಶಿಧರ್, ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಸುಪ್ರೀಂಕೋರ್ಟಿನ ಹಿರಿಯ ನ್ಯಾಯವಾದಿ ಅರುಣಾಚಲ ಹೆಗಡೆ, ಹಾಗೂ ರಾಷ್ಟ್ರ ಧರ್ಮ ಸಂಘಟನೆಯ ಅಧ್ಯಕ್ಷ ಸಂತೋಷ್ ಕೆಂಚಾಂಬ ಸಭೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...