Monday, December 8, 2025
Monday, December 8, 2025

ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವುದೇ ಗುರಿ- ಬಿಎಸ್ ವೈ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ವಿತರಣೆ ಮಾಡುವ ಮೂಲಕ ತಮ್ಮ 80ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ರಾಜ್ಯದ ನಾನಾ ಭಾಗಗಳಲ್ಲಿ ಬಿಎಸ್ ವೈ ಜನ್ಮದಿನಾಚರಣೆಯ ಕಾರ್ಯಕ್ರಮಗಳು ನಡೆದಿವೆ. ಟ್ರಾಕ್ಟರ್ ವಿತರಣೆಗೂ ಮುನ್ನ ಸಂಜಯನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಬಿಎಸ್ ವೈ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿ.ವೈ . ವಿಜಯೇಂದ್ರ ಸೇರಿದಂತೆ ಕುಟುಂಬಸ್ಥರು ಜೊತೆಯಲ್ಲಿದ್ದರು.

ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಪುನಹ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದ್ದು, ಬಜೆಟ್ ಅಧಿವೇಶನದ ಬಳಿಕ ಪ್ರವಾಸ ಮಾಡಲಾಗುವುದು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದೆ.

ಬಜೆಟ್ ಅಧಿವೇಶನದ ಬಳಿಕ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಜನರು ನಮಗೆ ಆಶೀರ್ವದಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...