Sunday, December 14, 2025
Sunday, December 14, 2025

ಮಾನ ಇದ್ದರೆ ಮೇಕೆದಾಟು ಯೋಜನೆಗೆ ಅನುಮತಿ ತನ್ನಿ-ಡಿಕೆಶಿ

Date:

ಯಾವ ಪ್ರಕರಣ ದಾಖಲಿಸಿದರೂ ಹೆದರುವುದಿಲ್ಲ. ಸಿದ್ದರಾಮಯ್ಯ ಹೇಳಿರುವಂತೆ ನಾವೆಲ್ಲರೂ ಜೈಲಿಗೆ ಹೋಗುತ್ತೇವೆ. ಯಾವ ಜೈಲು ಅಂತ ಹೇಳಿದರೆ ನಾವೇ ಹೋಗುತ್ತೇವೆ. ನಮ್ಮ ಯಾತ್ರೆಗೆ ಬಿಜೆಪಿ ನಾಯಕರು ಸಹ ಬರಬೇಕು ಎಂದು ಡಿ.ಕೆ. ಕುಮಾರ್ ಅವರು ತಿಳಿಸಿದ್ದಾರೆ.

ಇದು ನಮ್ಮ ಹೋರಾಟ ಅಲ್ಲ. ರಾಜ್ಯದ ಜನರ ಬದುಕಿಗಾಗಿ ಹೋರಾಟ. ಬೆಂಗಳೂರು ಜನರ ಕುಡಿಯುವ ನೀರಿಗಾಗಿ ಹೋರಾಟ. ಅದಕ್ಕಾಗಿ ಐದು ದಿನ ಬಿಸಿಲಿದ್ದರೂ ನಾವು ಹೆಜ್ಜೆ ಹಾಕೋಣ, ಇಂದೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮೇಕೆದಾಟುಗಾಗಿ ಸಂಸತ್ ಭವನದ ಎದುರು ಪಕ್ಷಾತೀತವಾಗಿ ಧರಣಿ ಮಾಡಿದ್ದೆವು. ಈಗ ಅದೇ ಯೋಜನೆ ಕಾರ್ಯರೂಪಕ್ಕೆ ತನ್ನಿ ಎಂದು ಪಾದಯಾತ್ರೆ ಮಾಡುತ್ತಿದ್ದೇವೆ. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಎರಡು ದಿನಗಳ ಪರಿಸರ ಇಲಾಖೆ ಅನುಮತಿ ಪಡೆದು ಯೋಜನೆ ಆರಂಭಿಸಬಹುದು. ನಾವು ಆಗ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಇದೇರೀತಿ ಬಂದು ಬೆಂಬಲ ಸೂಚಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ವಿಳಂಬಕ್ಕೆ ಬಿಜೆಪಿಯೇ ಅಡ್ಡಿಯಾಗಿದೆ. ಯೋಜನೆಗೆ ಪರಿಸರ ಅನುಮತಿ ತರಲು ಆಸಕ್ತಿ ವಹಿಸುತ್ತಿಲ್ಲ ಎಂದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಹೋರಾಟ ಜನರಿಗೆ ನೀರು ತರುವುದಾಗಿದೆ. ಆದರೆ ಬಿಜೆಪಿ ಸರ್ಕಾರ ಈ ಯೋಜನೆಯನ್ನು ರಾಜಕೀಯ ವಿಚಾರದಲ್ಲಿ ಮಾತನಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಮೊದಲ ಹಂತದ ಸೇರಿದ್ದ ಜನಸ್ತೋಮ ನೋಡಿ, ಹೊಟ್ಟೆ ಉರಿಯಿಂದಾಗಿ ಬಿಜೆಪಿ ಸುಳ್ಳಿನ ಕೊರೋನಾ ಪ್ರಕರಣದ ಕಥೆ ಹೇಳಿ ನಮಗೆ ಅಡ್ಡಿಪಡಿಸಿತ್ತು ಎಂದು ಕುಟುಕಿದರು.

ಸಿಎಲ್ ಪಿ ನಾಯಕ ಸಿದ್ದರಾಮಯ್ಯ, 2017 ರಲ್ಲೇ ನಾವು ಡಿಪಿಆರ್ ಸಿದ್ಧಪಡಿಸಿದ್ದೇವೆ. ಆದರೆ, ಬಿಜೆಪಿ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದೆ. ಸುಳ್ಳು ಜಾಹಿರಾತುಗಳ ಮೂಲಕ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಏನನ್ನೂ ಮಾಡಿಲ್ಲ ಎಂದು ಬಿಂಬಿಸುತ್ತಿದೆ. ರಾಜ್ಯದ ಜನರಿಗೆ ಬಿಜೆಪಿ ಮಾಡುತ್ತಿರುವ ಅನ್ಯಾಯ ಖಂಡಿಸಿ ಈ ಹೋರಾಟ ನಡೆಸಲಾಗುತ್ತಿದೆ. ಬಿಜೆಪಿಗೆ ಮಾನ ಇದ್ದರೆ, ಕೂಡಲೇ ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...