ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡಲಿದೆ. ಇದರಿಂದಾಗಿ ಭವಿಷ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳವಾಗಲಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗವು ಗುರುವಾರ ಬಸವ ಭವನದಲ್ಲಿ, ನೂತನ ಶಿಕ್ಷಣ ನೀತಿ ಮತ್ತು ಸಮಾಜಕಾರ್ಯ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂತನ ಶಿಕ್ಷಣ ನೀತಿಯ ಅನುಷ್ಠಾನದ ಆರಂಭಿಕ ಹಂತದಲ್ಲಿರುವುದರಿಂದ ಸಾಂಪ್ರದಾಯಿಕವಾಗಿ ಬೋಧಿಸಲಾಗುತ್ತಿದ್ದ ಪಠ್ಯಕ್ರಮವನ್ನು ಹೊಸ ಮಾದರಿಗೆ ಅಳವಡಿಸಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣದಿಂದ ಸರ್ಕಾರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನೆರವಾಗುವ ಉದ್ದೇಶದಿಂದ ಮಾದರಿ ಪಠ್ಯಕ್ರಮ ರಚನೆಗೆ ಸಮಿತಿಗಳನ್ನು ರಚಿಸಿತ್ತು.
ಸಮಾಜ ವಿಜ್ಞಾನಗಳ ಪಠ್ಯಕ್ರಮ ರಚನಾ ಸಮಿತಿಯ ಅಧ್ಯಕ್ಷರಾಗಿ ಸರ್ಕಾರ ತಮ್ಮನ್ನು ನೇಮಿಸಿದಾಗ, ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗಳಿಗೆ ನೆರವು ಒದಗಿಸುವ ಉದ್ದೇಶದಿಂದ ಮಾದರಿ ಪಠ್ಯಕ್ರಮವನ್ನು ರಚಿಸಿ ಕಳುಹಿಸಿಕೊಡಲಾಯಿತು.
ಆದರೆ ನೂತನ ಶಿಕ್ಷಣ ನೀತಿಯ ಪ್ರಕಾರ ಆಯಾ ವಿಶ್ವವಿದ್ಯಾಲಯಗಳು ಈ ಮಾದರಿ ಸಂರಚನೆ ಮತ್ತು ವಿಷಯಗಳ ಶೀರ್ಷಿಕೆಗಳನ್ನು ಉಳಿಸಿಕೊಂಡು ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಬಿ. ರಮೇಶ್ ಮಾತನಾಡಿ, ನೂತನ ಶಿಕ್ಷಣ ನೀತಿ ಇತರ ಎಲ್ಲ ವಿಷಯಗಳಂತೆ ಸಮಾಜ ಕಾರ್ಯ ವಿಷಯಕ್ಕೂ ಹೊಸ ಸಾಧ್ಯತೆಗಳನ್ನು ಸೃಷ್ಟಿಸಿದೆ. ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕ್ರಿಯಾತ್ಮಕ ಕಾರ್ಯದಲ್ಲಿ ಸಮಾಜ ಕಾರ್ಯ ಪದವೀಧರರು ವೃತ್ತಿಪರ ಸೇವೆ ಒದಗಿಸುತ್ತಾ ಬಂದಿದ್ದಾರೆ.
ಹೊಸದಾಗಿ ಅಳವಡಿಸಿಕೊಂಡಿರುವ ಅಂತರ್ಶಿಸ್ತೀಯ ಅಧ್ಯಯನವು ಸಮಾಜ ಕಾರ್ಯ ಪದವೀಧರರ ಲೋಕದೃಷ್ಟಿಯನ್ನು ಇನ್ನಷ್ಟು ವಿಸ್ತರಿಸಲಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸಮಾಜದ ಎಲ್ಲ ರಂಗಗಳಲ್ಲಿ ಮೌಲ್ಯಗಳ ಅಧಃಪತನವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಸಾಧ್ಯತೆಗಳನ್ನು ಅಳವಡಿಸಿಕೊಂಡು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಹೀಗೆ ಎಲ್ಲ ವರ್ಗಗಳನ್ನು ಮೇಲೆತ್ತುವ ಜವಾಬ್ದಾರಿಯನ್ನು ಸಮಾಜ ಕಾರ್ಯದ ವೃತ್ತಿಪರರು ನಿರ್ವಹಿಸಬೇಕಿದೆ. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ತಳಹಂತದಲ್ಲಿ ಕಾರ್ಯನಿರ್ವಹಿಸುವ ಸಾಮಾಜಿಕ ಕಾರ್ಯಕರ್ತರು ರಾಷ್ಟ್ರದ ಅಭಿವೃದ್ಧಿಗೆ ಇಂಬುಕೊಡುವ ತೆರೆಮರೆಯ ನಾಯಕರು ಎಂದು ಶ್ಲಾಘಿಸಿದರು.
ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಎ. ರಾಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಸಂಗೀತಾ ಮಾನೆ, ಪ್ರೊ. ಪರಶುರಾಮ ಕೆ. ಜಿ., ಪ್ರೊ. ಲೋಕೇಶ ವಿಚಾರ ಮಂಡಿಸಿದರು. ಪ್ರೊ. ಗುರುಲಿಂಗಯ್ಯ, ಪ್ರೊ. ಈ. ಚಂದ್ರಶೇಖರ್, ಡಾ. ಸಂಧ್ಯಾ ಕಾವೇರಿ, ಪ್ರೊ. ಅಂಜನಪ್ಪ, ಡಾ. ದಿಲೀಪ್ ಕುಮಾರ್, ಡಾ. ಸರವಣ, ಡಾ. ರವಿಶಂಕರ್, ಡಾ. ಮಹೇಶ್, ಶ್ರೀಧರ್, ಸುನಿತಾ, ನೇತ್ರಾವತಿ, ವಿವಿಧ ವಿಶ್ವವಿದ್ಯಾಲಯಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.