Tuesday, August 25, 2026
Tuesday, August 25, 2026

ಕಾಶ್ಮೀರ ಬಗ್ಗೆ ಚೀನಾ ಟೀಕೆ ಭಾರತ ದಿಟ್ಟ ಉತ್ತರ

Date:

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ.

ಚೀನಾ ಸೇರಿದಂತೆ ಇತರ ದೇಶಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಯಾವುದೇ ಹಕ್ಕು ಹೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಕಾಶ್ಮೀರ ಕುರಿತು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರ ಟೀಕೆಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ.

ಇತರ ದೇಶಗಳಿಗೆ ತನ್ನ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಯಾವುದೇ ಸ್ಥಾನ, ಅವಕಾಶ ಇಲ್ಲ ಎಂದು ಒತ್ತಿ ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ, ಇಸ್ಲಾಮಾ ಬಾದ್‌ನಲ್ಲಿ ನಡೆದ ಒಐಸಿ ಸಭೆಯ ಉಧ್ಘಾಟನಾ ಸಮಾರಂಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರಿಗೆ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡಲು ನಾವು ಅವಕಾಶ ಕೊಟ್ಟಿಲ್ಲ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳು ಸಂಪೂರ್ಣವಾಗಿ ಭಾರತದ ಆಂತರಿಕ ವ್ಯವಹಾರಗಳಾಗಿವೆ. ಚೀನಾ ಸೇರಿದಂತೆ ಇತರ ದೇಶಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಾಗೂ ಮಾತನಾಡುವ ಹಕ್ಕು ಹೊಂದಿಲ್ಲ ಎಂದು ಭಾರತ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.
ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿ, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಕಾಶ್ಮೀರ ವಿವಾದ ಸರಿಯಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳುತ್ತದೆ ಎಂದು ಚೀನಾ ನಂಬುತ್ತದೆ ಎಂದು ವಾಂಗ್ ಯೀ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಭಾರತ ಸ್ಪಷ್ಟನೆ ನೀಡಿದ್ದು, ಆಂತರಿಕ ವಿಚಾರದಲ್ಲಿ ಯಾರೂ ಕೂಡಾ ಮಾತನಾಡಬಾರದು ಎಂದು ತಕ್ಕ ಪ್ರತ್ಯುತ್ತರ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...