Sunday, April 27, 2025
Sunday, April 27, 2025

ಮುಗಿಯದ ಯುದ್ಧ ಮಾನವೀಯ ದೃಷ್ಟಿ ಕೊರತೆಯ ಪುಟಿನ್

Date:

ಯೂಕ್ರೇನ್ ಮೇಲೆ ರಷ್ಯಾ ಫೆ.24ರಂದು ದಾಳಿ ಆರಂಭಿಸಿದ್ದು, ಒಂದು ತಿಂಗಳು ಪೂರ್ಣವಾಗಿದೆ. ಮೂರನೇ ವಿಶ್ವ ಸಮರದ ಆತಂಕ ಸೃಷ್ಟಿಸಿರುವ ಈ ಯುದ್ಧ ಇನ್ನೂ ಮುಂದುವರಿದಿದೆ. ಯೂಕ್ರೇನ್ ಸಮರಾಂಗಣವಾಗಿದ್ದು, ಸಾಕಷ್ಟು ನಾಶನಷ್ಟಗಳನ್ನು ಅನುಭವಿಸಿದೆ.

ಆದರೆ ಅದರ ನಿಖರ ಚಿತ್ರಣ ಇನ್ನೂ ಜಗತ್ತಿಗೆ ಲಭ್ಯವಾಗಿಲ್ಲ ಎಂಬುದು ವಾಸ್ತವ.

ಎರಡನೇ ವಿಶ್ವ ಯುದ್ಧದ ನಂತರದಲ್ಲಿ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಅತಿದೊಡ್ಡ ಕದನ ಇದಾಗಿದ್ದು, ತಿಂಗಳು ಕಳೆದರೂ ತೀವ್ರತೆ ಹೆಚ್ಚುತ್ತಿದೆ. ಇದು ಜಗತ್ತಿನ ಕಳವಳವನ್ನು ಹೆಚ್ಚು ಮಾಡಿದೆ. ಉಭಯ ರಾಷ್ಟ್ರಗಳ ನಡುವಿನ ಶಾಂತಿಮಾತುಕತೆ ನಾಲ್ಕಾರು ಸುತ್ತುಗಳನ್ನು ಕಂಡಿದೆಯಾದರೂ ಫಲ ಕಂಡಿಲ್ಲ.

ಯುದ್ಧ ನಿರತ ರಷ್ಯಾ ಮೇಲೆ ಅಮೆರಿಕ ಮತ್ತು ನ್ಯಾಟೋ ಮಿತ್ರ ರಾಷ್ಟ್ರಗಳು ವಿವಿಧ ನಿರ್ಬಂಧಗಳನ್ನು ಹೇರಿವೆ.

ಆ ಮೂಲಕ ಯುದ್ಧ ತೀವ್ರತೆ ಕಡಿಮೆ ಮಾಡುವ ಪ್ರಯತ್ನ ನಡೆಸಿವೆ. ಆದರೆ, ಇದಾವುದೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ನಿಲುವನ್ನು ಬದಲಾಯಿಸುವಲ್ಲಿ ಸಫಲವಾಗಿಲ್ಲ. ಯೂಕ್ರೇನ್​ಗೆ ಅಮೆರಿಕ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳು ಸೇನಾ ಮತ್ತು ಇತರೆ ನೆರವುಗಳನ್ನು ಪೂರೈಸುತ್ತಿದ್ದು, ರಷ್ಯಾಕ್ಕೆ ತಡೆಯೊಡ್ಡುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ನಡೆಸಿವೆ ಎಂದು ತಿಳಿದುಬಂದಿದೆ.

ರಷ್ಯಾ-ಯೂಕ್ರೇನ್ ನಾಗರಿಕರು ಈ ಯುದ್ಧದ ಕಾರಣ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಷ್ಯಾ ಮೇಲೆ ಉಕ್ರೇನ್ ದಾಳಿ ನಡೆಸಿದ ವರದಿ ಬಂದಿಲ್ಲ. ಆದರೂ, ತೃತೀಯ ರಾಷ್ಟ್ರಗಳು ವಿಧಿಸಿರುವ ನಿರ್ಬಂಧದ ಕಾರಣ ರಷ್ಯಾ ಜನರ ಬದುಕು ತಲ್ಲಣಗೊಂಡಿದೆ. ಉಕ್ರೇನ್ ನಲ್ಲಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೇ ಭೀತಿಯಿಂದ 35 ಲಕ್ಷಕ್ಕೂ ಹೆಚ್ಚು ಜನ ನೆರೆ ರಾಷ್ಟ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಅಮೆರಿಕ ಮತ್ತು ನ್ಯಾಟೋ ರಾಷ್ಟ್ರಗಳ ಹಿತಕ್ಕೆ ಪೂರಕವಾಗಿ ನಡೆಯುತ್ತಿರುವ ಯೂಕ್ರೇನ್​ನ ರಾಜಧಾನಿ ಕಿಯೆವ್ ವಶಪಡಿಸಿಕೊಂಡು ಸರ್ಕಾರ ಪತನಗೊಳಿಸುವ ರಷ್ಯಾ ಸರ್ಕಾರದ ಪ್ರಯತ್ನಕ್ಕೆ ಇನ್ನೂ ನಿರೀಕ್ಷಿತ ಫಲ ಸಿಕ್ಕಿಲ್ಲ. ರಷ್ಯಾ ಪರ ಸರ್ಕಾರವನ್ನು ಅಲ್ಲಿ ಸ್ಥಾಪಿಸಿ, ನ್ಯಾಟೋ ರಾಷ್ಟ್ರಗಳು ತನ್ನ ರಾಷ್ಟ್ರದ ಸುತ್ತ ಇರುವುದನ್ನು ತಪ್ಪಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...