Friday, February 6, 2026
Friday, February 6, 2026

ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Date:

ತರಗತಿಗಳಲ್ಲಿ ಹಿಜಾಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.

ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಅವರು ವಾದಿಸಿದರು.

ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು ಎಂದು ತಿಳಿದುಬಂದಿದೆ.

ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು.

ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಾಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...