Saturday, June 6, 2026
Saturday, June 6, 2026

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ...