Wednesday, January 21, 2026
Wednesday, January 21, 2026

ಸಮರ ಮನುಷ್ಯ ಪುಟಿನ್ ಆಂತರ್ಯದಲ್ಲಿ ಕೌಟುಂಬಿಕ ಅಶಾಂತಿ

Date:

ಉಕ್ರೇನ್‌ ವಿರುದ್ಧದ ಯುದ್ಧದ ದುಷ್ಪರಿಣಾಮ ರಷ್ಯಾದ ಜನರ ಮೇಲಷ್ಟೇ ಅಲ್ಲದೆ, ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ಅವರ ಕುಟುಂಬಕ್ಕೂ ತಟ್ಟಿದೆ.
ಉಕ್ರೇನ್‌ ವಿಚಾರವಾಗಿ ಪುಟಿನ್‌ ತೆಗೆದುಕೊಂಡ ನಿರ್ಧಾರವು ಈಗ ಅವರ ಮಗಳ ಮದುವೆಗೇ ಕಂಟಕ ಪ್ರಾಯವಾಗಿ ಪರಿಣಮಿಸಿದೆ.

ಉಕ್ರೇನ್‌ ಮೇಲೆ ಯುದ್ಧ ಸಾರಿದ್ದಕ್ಕಾಗಿ ಅಮೆರಿಕ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾಗೆ ಹಲವು ನಿರ್ಬಂಧಗಳನ್ನು ವಿಧಿಸಿವೆ. ಪರಿಣಾಮವಾಗಿ ಪುಟಿನ್‌ ಅವರ ಹಿರಿಯ ಮಗಳ ಎರಡು ಮಹತ್ವಾಕಾಂಕ್ಷೆಯ ಕನಸು ನುಚ್ಚು ನೂರಾಗಿದೆ.

ಡಾ. ಮರಿಯಾ ವೊರೊಂಟ್ಸೊವಾ (36) ಅವರೇ ವ್ಲಾಡಿಮಿರ್‌ ಪುಟಿನ್ ಮತ್ತು ಲ್ಯುಡ್ಮಿಲಾ ದಂಪತಿ ಹಿರಿಯ ಪುತ್ರಿ. ಮರಿಯಾ ಅವರ ಮದುವೆ ಮುರಿದು ಬಿದ್ದಿದೆ. ಇದರ ಜೊತೆಗೆ ಮರಿಯಾ ಅವರ ಆಧುನಿಕ ವೈದ್ಯಕೀಯ ಕೇಂದ್ರ ನಿರ್ಮಿಸುವ ಬಹುದೊಡ್ಡ ಕನಸು ಕನಸಾಗಿಯೇ ಉಳಿದಿದೆ.

ಸೆಂಟ್‌ ಪೀಟರ್ಸ್‌ಬರ್ಗ್‌ನಲ್ಲಿ ಆಧುನಿಕ ವೈದ್ಯಕೀಯ ಕೇಂದ್ರ ನಿರ್ಮಿಸುವ ದೊಡ್ಡ ಯೋಜನೆ ಹೊಂದಿದ್ದೇನೆ. ಯುರೋಪ್‌ ಮತ್ತು ಪರ್ಷಿಯನ್ ಗಲ್ಫ್ ದೇಶಗಳಿಂದ ಶ್ರೀಮಂತ ಶೇಖ್‌ ರೋಗಿಗಳನ್ನು ಆಕರ್ಷಿಸುವ ಯೋಜನೆ ಇದಾಗಿದೆ ಎಂದು ಮಾಧ್ಯಮದೊಂದಿಗೆ ಈ ಹಿಂದೆ ಮರಿಯಾ ಹೇಳಿಕೊಂಡಿದ್ದರು.

ಆದರೆ ಉಕ್ರೇನ್‌ ಮೇಲಿನ ಯುದ್ಧದ ನಂತರ ರಷ್ಯಾಗೆ ಯೂರೋಪಿಯನ್ನರಾಗಲಿ ಅಥವಾ ಶೇಖ್‌ಗಳಾಗಲಿ ಯಾರು ಬರುತ್ತಾರೆ ಎಂಬುದು ಪ್ರಶ್ನೆಯಾಗಿದೆ.

ಡಚ್‌ ಉದ್ಯಮಿ ಜೋರಿಟ್‌ ಫಾಸೆನ್‌ ಅವರೊಂದಿಗಿನ ಮರಿಯಾ ವೊರೊಂಟ್ಸೊವಾ ಸಂಬಂಧವೂ ಮುರಿದು ಬಿದ್ದಿದೆ. ಯುದ್ಧ ಆರಂಭವಾದ ನಂತರ ಈ ಜೋಡಿ ಬೇರ್ಪಟ್ಟಿದೆ. ಇವರು ಮಕ್ಕಳನ್ನೂ ಹೊಂದಿದ್ದಾರೆ. ಆದರೆ ಡಚ್‌ ಉದ್ಯಮಿ ಫಾಸೆನ್‌ ತಾನು ಪುಟಿನ್‌ ಅವರ ಅಳಿಯ ಅಲ್ಲ ಎಂದು ಹೇಳಿಕೊಂಡಿದ್ದಾರೆ.

2017ರಲ್ಲಿ ಸಂದರ್ಶನವೊಂದರಲ್ಲಿ ಪುಟಿನ್‌, ನಾನು ತಾತಾ ಆಗಿದ್ದೇನೆ. ಮೊಮ್ಮಕ್ಕಳೊಂದಿಗೆ ಆಟ ಆಡಿರುವುದು ತುಂಬಾ ಕಡಿಮೆ ಎಂದು ಹೇಳಿಕೊಂಡಿದ್ದರು.
ಪುಟಿನ್‌ ಮಗಳು ವೊರೊಂಟ್ಸೊವಾ ಪ್ರಖ್ಯಾತ ವೈದ್ಯೆ. ಮಕ್ಕಳಲ್ಲಿ ಕಂಡುಬರುವ ಅಪರೂಪದ ಅನುವಂಶಿಕ ಕಾಯಿಲೆಗಳಿಗೆ ಸಂಬಂಧಿಸಿದಂತೆ ತುಂಬಾ ಪ್ರಖ್ಯಾತಿ ಪಡೆದಿದ್ದಾರೆ. ರಷ್ಯಾ ಆರೋಗ್ಯ ಸಚಿವಾಲಯದ ಎಂಡೊಕ್ರಿನಾಲಜಿ ನ್ಯಾಷನಲ್‌ ಮೆಡಿಕಲ್‌ ರಿಸರ್ಚ್‌ ಸೆಂಟರ್‌ನಲ್ಲಿ ವೈದ್ಯಕೀಯ ಸಂಶೋಧನೆಯ ಮುಖ್ಯಸ್ಥರಾಗಿದ್ದಾರೆ.

ವೊರೊಂಟ್ಸೊವಾ ಅವರು 1986ರಲ್ಲಿ ಜನಿಸಿದರು. ಪುಟಿನ್‌ ಅವರು ಕೆಜಿಬಿ ಗೂಡಾಚಾರರಾಗಿದ್ದಾಗ ಇವರ ಜನನವಾಯಿತು. ಪುಟಿನ್‌ ಅವರಿಗೆ ಕತ್ರಿನಾ ಎಂಬ ಮತ್ತೊಬ್ಬರು ಮಗಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...