Wednesday, March 26, 2025
Wednesday, March 26, 2025

ತಮಿಳುನಾಡು ವಿರುದ್ಧ ಖಂಡನಾ ನಿರ್ಣಯಸದನದಲ್ಲಿ ಅಂಗೀಕಾರ

Date:

ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ, ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದಿಂದ ನಿರ್ಣಯ ಮಂಡಿಸಲಾಗಿತ್ತು. ಕೆಲ ಸಣ್ಣ ತಿದ್ದುಪಡಿಯ ನಂತರ ಸರ್ವಾನುಮತದಿಂದ ಅಂಗೀಕಾರ ಕೂಡ ದೊರೆತಿತ್ತು.

ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ನಿರ್ಣಯದ ಬಗ್ಗೆ ಪ್ರತಿಪಕ್ಷಗಳು ಕೇಳಿದ್ದಂತಹ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21 03, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯವು ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ.

ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 30 ನೀರಿನ ಪ್ರಮಾಣವನ್ನು ಖಚಿತಪಡಿಸುವಂತ ನಿಗದಿಪಡಿಸಿದೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 consumptive use) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ.

ಸದರಿ ಯಾವುದೇ ಭಾದಕ ಅಥವಾ ಹಾನಿಯಾಗುವುದಿಲ್ಲ. ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಭಾಧಕ ಅಥವಾ ಹಾನಿಯಾಗುವುದಿಲ್ಲ.

ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ ಎಂದಿದ್ದರು.

ಈ ಬಳಿಕ, ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು, ವಿಧಾನ ಪರಿಷತ್ತಿನಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ. ಈ ಮೂಲಕ ಉಭಯ ಸದನಗಳಲ್ಲಿಯೂ ಮೇಕೆದಾಟು ಯೋಜನೆಯ ಖಂಡನಾ ನಿರ್ಣಯ ಅಂಗೀಕಾರ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education ಮಾರ್ಚ್ 27 & 28 ರಂದು ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ‌ ಕ್ರೀಡಾಕೂಟ

Department of School Education ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ...

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...