Tuesday, December 16, 2025
Tuesday, December 16, 2025

ಸಾವಯವ ಸಿರಿ ಯೋಜನೆ ರಾಜ್ಯಾದ್ಯಂತ ಅನುಷ್ಠಾನಕ್ಕೆ ಆದೇಶ

Date:

ಸಾವಯವ ಸಿರಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಹತ್ತು ವರ್ಷಗಳ ಅನುಭವವುಳ್ಳ ಆಯಾ ತಾಲ್ಲೂಕುಗಳ ಟ್ರಸ್ಟ್ ಅಥವಾ ಸೊಸೈಟಿ ಕಾಯ್ದೆಯಡಿ ನೊಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸಲು ಯೋಜನೆಯನ್ನು ರೂಪಿಸಲಾಗಿದೆ.

ಈ ಹೊಸ ಯೋಜನೆಯನ್ನು
ಸಾವಯವ ಸಿರಿ ಯೋಜನೆಯ ಹೆಸರಿನಲ್ಲಿ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ.

ಸಾವಯವ ಕೃಷಿ ಉತ್ತೇಜನದಲ್ಲಿ ತಾಲ್ಲೂಕುಗಳಲ್ಲಿ ಈಗಾಗಲೇ ಸಾವಯವ ಕೃಷಿಯಲ್ಲಿ ತೊಡಗಿರುವ ರಾಜ್ಯದ ಟ್ರಸ್ಟ್ ಅಥವಾ ಸೊಸೈಟಿ ಕಾಯ್ದೆಯಡಿ ನೊಂದಾಯಿತ ಸಾವಯವ ಕೃಷಿಕರ ಸಂಘ/ ಸಾವಯವ ಒಕ್ಕೂಟಗಳ ಮೂಲಕ ಯೋಜನೆಯನ್ನು ಅನುಷ್ಟಾಗೊಳಿಸಲಾಗುವುದು.

ಸಾವಯವ ಕೃಷಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಅನುಭವ ಹೊಂದಿರುವ ಸ್ಥಳೀಯ ನೋಂದಾಯಿತ ಸಾವಯವ ರೈತರ ಗುಂಪು/ ಸಂಘ/ ಒಕ್ಕೂಟಗಳಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯಾಗುವ ಗುಂಪುಗಳು ತಮ್ಮ ವ್ಯಾಪ್ತಿಯ ಕೃಷಿಕರನ್ನು ಉತ್ತೇಜಿಸುವುದು ಹಾಗೂ ಹೆಚ್ಚಿನ ರೈತರನ್ನು ಸಾವಯವ ಕೃಷಿ ವ್ಯಾಪ್ತಿ ಒಳಪಡಿಸುವುದು.

ಆಸಕ್ತ ಸಾವಯವ ಕೃಷಿಕರ ಸಂಘ/ ಸಾವಯವ ಒಕ್ಕೂಟ/ ಗುಂಪುಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2022ರ ಏಪ್ರಿಲ್ 2ರೊಳಗೆ ಆಯಾ ತಾಲ್ಲೂಕು ವ್ಯಾಪ್ತಿಯ ಸಂಬಂಧಪಟ್ಟ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಿಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ವ್ಯಾಪ್ತಿಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...