Saturday, March 28, 2026
Saturday, March 28, 2026

ಅನೇಕರ ತ್ಯಾಗ ಬಲಿದಾನಗಳ ಫಲ ನಮ್ಮ ಸ್ಯಾತಂತ್ರ್ಯ- ಅನುರಾಧ

Date:

ನಮಗೆ ದೊರೆತಂತಹ ಸ್ವಾತಂತ್ರ್ಯ ಅನೇಕ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನದ ಪ್ರತೀಕವಾಗಿದೆ. ಪ್ರಸ್ತುತ ಯುವಜನತೆಯು ಜಾತ್ಯತೀತವಾಗಿ ನಾವೆಲ್ಲಾ ಒಂದೇ ಎಂಬ ಭಾವನೆಗಳನ್ನು
ಬೆಳಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ. ಅನುರಾಧ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಶಾಂತವೇರಿ ಗೋಪಾಲಗೌಡ ಅಧ್ಯಯನ ಪೀಠ ಹಾಗೂ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಶುಕ್ರವಾರ‌ ಬಸವ ಸಭಾಭವನದಲ್ಲಿ ನಡೆದ ಅಸಹಕಾರ ಚಳುವಳಿ ಮತ್ತು ಭಾರತೀಯ ಸ್ವಾತಂತ್ರ್ಯ ಸಂಗ್ರಾಮ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಯೋಧರ ಹೋರಾಟ, ತ್ಯಾಗ, ಬಲಿದಾನಗಳು ವ್ಯರ್ಥವಾಗಬಾರದು. ಅವರ ಆಶೋತ್ತರಗಳು ಪ್ರಸ್ತುತ ಯುವಜನತೆಗೆ ದಾರಿದೀಪವಾಗಬೇಕು.

ಇಂಥಹ ವಾತಾವರಣ ಸೃಷ್ಟಿಸುವ ಹೊಣೆಗಾರಿಕೆ ಶೈಕ್ಷಣಿಕ ಸಂಸ್ಥೆಗಳಿಗಿವೆ ಎಂದರು.

ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ.‌ ನವೀನ್ ಕುಮಾರ್ ಮಾತನಾಡಿ, ಮಲೆನಾಡಿನ ಹೆಮ್ಮೆಯ ಮಗ ಶಾಂತವೇರಿ ಗೋಪಾಲಗೌಡ ಅವರ ಕೊಡುಗೆ ಅನನ್ಯವಾದುದು. ಪ್ರಸ್ತುತ ಯುವ ಪೀಳಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದ ರಾಷ್ಟ್ರೀಯ ಚಳವಳಿಯನ್ನು ಅರ್ಥಮಾಡಿಕೊಳ್ಳುವಲ್ಲಿ ಸೋತಿದ್ದಾರೆ ಎಂದರು.

ಪ್ರೊ.‌ ರಾಜಾರಾಂ‌‌ ಹೆಗಡೆ, ಪ್ರೊ.‌ಜೆ. ಸದಾನಂದ, ಪ್ರೊ. ಉದ್ಧಗಟ್ಟಿ ವೆಂಕಟೇಶ್, ಪ್ರೊ. ಷಣ್ಮುಖ, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...