ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಅಧಿಕೃತವಾಗಿ ಈ ಬಗ್ಗೆ ಆದೇಶ ಹೊರಡಿಸಿದೆ. ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ.
ಅದರಂತೆ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿದೆ.
ರೇಣುಕಾಚಾರ್ಯ ಅವರು ತಮ್ಮ ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗೃಂಥವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಸದ್ಯ ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಮಾರ್ಚ್ 16 ರಂದು ಆಚರಿಸಿಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.