Friday, February 6, 2026
Friday, February 6, 2026

ತಿಂಗಳಾದರೂ ನಿಲ್ಲದ ಸಮರ ಸಂಧಾನಕ್ಕೆ ಝೆಲೆನ್ಸ್ಕಿ ಮನವಿ

Date:

ಉಕ್ರೇನ್‌ ಮತ್ತು ರಷ್ಯಾದ ನಡುವಿನ ಯುದ್ಧದಿಂದ ಭಾರಿ ಹಾನಿಯುಂಟಾಗಿದೆ. ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ. ಹಾಗಾಗಿ, ಝೆಲೆನ್ಸ್ಕಿ ಮತ್ತೊಮ್ಮೆ ರಷ್ಯಾಕ್ಕೆ ಮಾತುಕತೆ ನಡೆಸಿ, ಯುದ್ಧ ಕೊನೆಗೊಳಿಸುವಂತೆ ಮನವಿ ಮಾಡಿದ್ದಾರೆ.

ಆದರೆ, ಉಕ್ರೇನ್ ಶಾಂತಿಯ ಸಲುವಾಗಿ ತನ್ನ ಯಾವುದೇ ಪ್ರದೇಶವನ್ನು ಬಿಟ್ಟುಕೊಡಲು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿ ಒಂದು ತಿಂಗಳು ಪೂರ್ಣಗೊಂಡಿವೆ. ರಷ್ಯಾ ನಡೆಸಿದ ಯುದ್ಧಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಅದಕ್ಕೆ ಜಗ್ಗದೇ ವ್ಲಾಡಿಮಿರ್ ಪುಟಿನ್ ನಿರಂತರ ದಾಳಿ ಮುಂದುವರೆಸಿದ್ದಾರೆ. ಈಗಾಗಲೇ ಉಕ್ರೇನ್‌ ಮತ್ತು ರಷ್ಯಾದ ನಡುವಿನ ಯುದ್ಧದಿಂದ ಭಾರಿ ಹಾನಿಯುಂಟಾಗಿದ್ದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ.

ಇನ್ನೊಂದೆಡೆ, ರಷ್ಯಾ ದಾಳಿಗೆ ಹೆದರಿ ಹಲವಾರು ಮಂದಿ ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಶುಕ್ರವಾರ ರಾಷ್ಟ್ರವನ್ನುದ್ದೇಶಿಸಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ರಷ್ಯಾದ ಜನರಲ್ ಸ್ಟಾಫ್‌ನ ಡೆಪ್ಯುಟಿ ಚೀಫ್ ಕರ್ನಲ್ ಜನರಲ್ ಸೆರ್ಗೆಯ್ ರುಡ್‌ಸ್ಕೋಯ್‌ಗೆ ಮಾತುಕತೆ ನಡೆಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ರಷ್ಯಾದ ಪಡೆಗಳು ಈಗ ಡಾನ್‌ಬಾಸ್‌ ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾಗಿವೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ವಿಡಿಯೋ ಸಂದೇಶ ಹಂಚಿಕೊಂಡಿರುವ ಉಕ್ರೇನ್ ವಿದೇಶಾಂಗ ಸಚಿವಾಲಯ, ರಷ್ಯಾದ ಯುದ್ಧವು ಕೇವಲ ಯುದ್ಧವಲ್ಲ. ಉಕ್ರೇನ್​​​ನ ಸ್ವಾತಂತ್ರ್ಯದ ವಿರುದ್ಧದ ಯುದ್ಧವಾಗಿದೆ. ಜನರ ಹಕ್ಕು ಕಸಿದುಕೊಳ್ಳುವ ಈ ಯುದ್ಧದ ವಿರುದ್ಧ ನೀವೆಲ್ಲ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ. ನಿಖರವಾಗಿ ಒಂದು ತಿಂಗಳು ಮುಂದುವರೆದಿರುವ ಈ ಯುದ್ಧವನ್ನು ನಿಲ್ಲಬಯಸುವ ನೀವೆಲ್ಲ ಒಟ್ಟಾಗಿ ನಮಗೆ ಬೆಂಬಲ ನೀಡಬೇಕು.

ರಷ್ಯಾ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಝೆಲೆನ್ಸ್ಕಿ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...