ಪ್ರತಿ ತಿಂಗಳ ಕೊನೆಯ ಭಾನುವಾರ ಎಂದಿನಂತೆ ನಡೆಯುವ ಮನ್ ಕೀ ಬಾತ್ ಬಾನುಲಿ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಪಂಚ ರಾಜ್ಯ ಚುನಾವಣೆಯ ನಂತರ ನಡೆದ ಮೊದಲ ರೆಡಿಯೋ ಕಾರ್ಯಕ್ರಮ ಇದಾಗಿದೆ. ಈ ಸಂದರ್ಭದಲ್ಲಿ ಜನರಿಗೆ ಮೋದಿ ಅವರು ಈ ಕೆಳಕಂಡ ಅಂಶಗಳನ್ನು ತಿಳಿಸಿದ್ದಾರೆ.
ಭಾರತವು ಇಂದು ಆರ್ಥಿಕ ಪ್ರಗತಿಯತ್ತ ಬೃಹತ್ ಹೆಜ್ಜೆಗಳನ್ನು ಇಡುತ್ತಿದೆ. ಭಾರತವು ಈಗ ದೊಡ್ಡದಾಗಿ ಯೋಚಿಸುತ್ತಿದೆ. ಅದನ್ನು ಸಾಕಾರಗೊಳಿಸಲು ಕೆಲಸ ಮಾಡುತ್ತಿದೆ. ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಿದ್ದು, ಇದು ಭಾರತದ ಸಾಮರ್ಥ್ಯವನ್ನು ಸೂಚಿಸುತ್ತದೆ. ವಿಶ್ವದಲ್ಲಿ ಭಾರತೀಯ ವಸ್ತುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಭಾರತದಿಂದ ಹೊಸ ಉತ್ಪನ್ನಗಳನ್ನು ಹೊಸ ಸ್ಥಳಗಳಿಗೆ ರಫ್ತು ಮಾಡಲಾಗುತ್ತಿದೆ. ಮೇಡ್ ಇನ್ ಇಂಡಿಯಾ ಉತ್ಪನ್ನಗಳು ಈಗ ವಿದೇಶದಲ್ಲಿ ಹೆಚ್ಚು ಗೋಚರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಈ ಹಿಂದೆ ದೊಡ್ಡ ಜನರು ಮಾತ್ರ ಸರ್ಕಾರಕ್ಕೆ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ನಂಬಲಾಗಿತ್ತು ಆದರೆ, ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ಪೋರ್ಟಲ್ ಆ ನಂಬಿಕೆಯನ್ನು ಬದಲಾಯಿಸಿದೆ. ಇದು ನವ ಭಾರತದ ಆತ್ಮವನ್ನು ತೋರಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಆಯುಷ್ ವಲಯದಲ್ಲಿ ಹಲವಾರು ಸ್ಟಾರ್ಟ್ ಅಪ್ಗಳು ಮತ್ತು ಉದ್ಯಮಗಳ ಏರಿಕೆ ಮತ್ತು ಯಶಸ್ಸು ಸಾಧಿಸಿದೆ.ಇದು ಪ್ರೇರಣದಾಯಕ ಪ್ರವೃತ್ತಿಯಾಗಿದೆ ಎಂದು ಮೋದಿ ಅವರು ತಿಳಿಸಿದ್ದಾರೆ.
ಇದೇ ವೇಳೆಯಲ್ಲಿ 125 ವರ್ಷದ ಯೋಗ ಗುರು ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಇತ್ತೀಚೆಗೆ ನಡೆದ ಪದ್ಮ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ನೀವು ಬಾಬಾ ಶಿವಾನಂದರನ್ನು ನೋಡಿರಬೇಕು. ಅವರ ಚೈತನ್ಯ ಮತ್ತು ಫಿಟ್ನೆಸ್ ನೋಡಿ ಎಲ್ಲರೂ ಆಶ್ಚರ್ಯಚಕಿತರಾದರು. ಅವರ ಆರೋಗ್ಯ ದೇಶದಲ್ಲಿ ಚರ್ಚೆಯ ವಿಷಯವಾಗಿದೆ. ಅವರಿಗೆ ಯೋಗದ ಬಗ್ಗೆ ಒಲವಿದೆ ಎಂದು ಹೇಳಿದರು.
ಮುಪ್ಪಟಂ ಶ್ರೀನಾರಾಯಣರಂತಹ ಜನರು ಪ್ರಾಣಿಗಳ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆಂದರೆ ಅವರು ಮಣ್ಣಿನ ಪಾತ್ರೆಗಳನ್ನು ವಿತರಿಸುತ್ತಾರೆ. ಇದರಿಂದ ಜನರು ಪಕ್ಷಿಗಳು ಮತ್ತು ಪ್ರಾಣಿಗಳಿಗೆ ನೀರು ಒದಗಿಸುತ್ತಾರೆ. ಅವರು ಅಂತಹ ಒಂದು ಲಕ್ಷ ಪಾತ್ರೆಗಳನ್ನು ನೀಡಿದ್ದಾರೆ. ಹಾಗೂ ಅವುಗಳನ್ನು ಗಾಂಧೀಜಿ ಆಶ್ರಮಕ್ಕೆ ದಾನ ಮಾಡಲಿದ್ದಾರೆ. ಕೆಲವು ವ್ಯಕ್ತಿಗಳು ನೈಸರ್ಗಿಕ ನೀರಿನ ಮೂಲಗಳನ್ನು ಸಂರಕ್ಷಿಸಲು ಶ್ಲಾಘನೀಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ನಾಸಿಕ್ನಲ್ಲಿರುವ ಚಂದ್ರಕಿಶೋರ್ ಗೋದಾವರಿ ನದಿಯ ಸುತ್ತ ಕಸ ಹಾಕುವ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಪುರಿಯಲ್ಲಿ ರಾಹುಲ್ ಮಹಾರಾಣಾ, ಧಾರ್ಮಿಕ ಸ್ಥಳಗಳ ಆವರಣದಿಂದ ಪ್ಲಾಸ್ಟಿಕ್ ಕಸವನ್ನು ಸ್ವಚ್ಛಗೊಳಿಸುತ್ತಾರೆ ಎಂದು ಹೇಳಿದರು.
ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ. ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರಲ್ಲಿ ಅನಕ್ಷರತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದರು. ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗದ ಹೆಣ್ಣು ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ನಾವು ಕನ್ಯಾ ಶಿಕ್ಷಾ ಪ್ರವೇಶ ಉತ್ಸವವನ್ನು ಪ್ರಾರಂಭಿಸಿದ್ದೇವೆ.
ಏಕ್ ಭಾರತ್, ಶ್ರೇಷ್ಠ ಭಾರತ್ ಎಂಬ ಮನೋಭಾವದ ಧ್ಯೋತಕವಾಗಿರುವ ಗುಜರಾತ್ನ ಕರಾವಳಿ ಭಾಗದಲ್ಲಿ ನಡೆಯುವ ಜಾತ್ರೆಯ ಬಗ್ಗೆ ಎಷ್ಟು ಜನರಿಗೆ ತಿಳಿದಿದೆ. ನಾನು ನೀರಿನ ಕೊರತೆ ಎದುರಿಸುತ್ತಿರುವ ಗುಜರಾತ್ನಿಂದ ಬಂದಿದ್ದೇನೆ. ಗುಜರಾತ್ನಲ್ಲಿ ನೀರಿಗಾಗಿ ಸ್ಟೆಪ್ವೆಲ್ಗಳು ನಿರ್ಣಾಯಕವಾಗಿವೆ. ಜಲ ಮಂದಿರ ಯೋಜನೆಯು ನೀರಿನ ಸಂರಕ್ಷಣೆ ಮತ್ತು ಮೆಟ್ಟಿಲುಬಾವಿಗಳನ್ನು ಪುನರುಜ್ಜೀವನಗೊಳಿಸುವಲ್ಲಿ ಒಂದು ಮಹತ್ವದ ತಿರುವು ನೀಡಿದೆ. ಇದು ಅನೇಕ ಪ್ರದೇಶಗಳಲ್ಲಿ ನೀರಿನ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.