Thursday, December 18, 2025
Thursday, December 18, 2025

ತೀರ್ಥಹಳ್ಳಿ- ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಅನುಮತಿ- ಜ್ಞಾನೇಂದ್ರ

Date:

ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯೋಜನೆಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರ್ಕಾರ 156 ಕೋಟಿ ರೂ. ಮಂಜೂರು ಮಾಡಿದೆ.

ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿಯಲ್ಲಿ ಬರುವ ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ.

58 ಕೋಟಿ ರೂಪಾಯಿಗಳ ವೆಚ್ಚದ ಈ ಕಾಮಗಾರಿಯನ್ನು ಸದ್ಯದಲ್ಲಿಯೇ ಎತ್ತಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇಲ್ಸೇತುವೆ ನಿರ್ಮಾಣದ ಅಗತ್ಯದ ಕುರಿತು ಈ ಹಿಂದೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಯಾಗಿದೆ. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರೂ ಸಹ ಮೇಲ್ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವರ ಜೊತೆ ಸಮಾಲೋಚಿಸಿದ್ದರು. ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸಲು ಕೋರಿದ್ದರು ಎಂದೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಭಾರತೀಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯಷ್ಟೇ ಅಲ್ಲದೆ ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯಿಂದ, ಆಗುಂಬೆವರೆಗೆ 14.77 ಕಿಲೊಮೀಟರ್ ರಾಷ್ಟ್ರೀಯ ಹೆದ್ದಾರಿ 169-A ಗೆ ದ್ವಿಪಥ ಪಿಎಸ್‌, ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರೂ 96.20 ಕೋಟಿಗೆ ಅನುಮೋದನೆ ಸಹ ನೀಡಲಾಗಿದೆ. ಕಾಮಗಾರಿ ಚುರುಕಿಗೆ ಸಹಾಯವಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ಈ ಎರಡೂ ಕಾಮಗಾರಿಗಳಿಗೆ ಅನುಮತಿ ನೀಡಿ ಅನುದಾನ ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದೀಜಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ, ಹಾಗೂ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಧನ್ಯವಾದ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...