Sunday, December 14, 2025
Sunday, December 14, 2025

ಜಿಲ್ಲಾಧಿಕಾರಿಗಳಿಗೆ ಬೇಲೂರಿನ‌ ಜನಪರ ಸಂಘಟನೆಗಳ ಮನವಿ

Date:

ಬೇಲೂರು ಚನ್ನಕೇಶವ ಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರದಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ದೇವಸ್ಥಾನದ ಹೊರಗೆ ಪ್ರವಾಸಿಗರಿಗೆ ಮಾಹಿತಿ ನೀಡಿ, ಸಣ್ಣಪುಟ್ಟ ವ್ಯಾಪಾರ ನಡೆಸುವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ, ವಹಿವಾಟು ನಡೆಸದಂತೆ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಇದು ಅಸಾಂವಿಧಾನಿಕ ಕ್ರಮವಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಬೇಲೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ನಡೆಯುವ ಜಾತ್ರೆ, ಉತ್ಸವ, ಹಬ್ಬಗಳು ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಮರಿಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಬೇಕು. ಹಾಗೂ ಅನಧಿಕೃತವಾಗಿ ನಿರ್ಬಂಧ ಹೇರಿ ಸಾಮಾಜಿಕ ಬಹಿಷ್ಕಾರ ಹಾಕದಂತೆ ಜಿಲ್ಲಾಡಳಿತ ಆದೇಶ ಹೊರಡಿಸಬೇಕು ಎಂದು
ಒತ್ತಾಯಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ವಿರುದ್ಧ ಸುಳ್ಳು ಮತ್ತು ಅಪಪ್ರಚಾರದ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹರಡುತ್ತಿರುವ ಸಂಘಟನೆಗಳು ಮತ್ತು ವ್ಯಕ್ತಿಗಳ ವಿರುದ್ಧ ಪೋಲೀಸರು ಕ್ರಮ ಜರುಗಿಸಬೇಕು. ಬೇಲೂರು ದೇವಸ್ಥಾನವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಇಂತಹ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ದೇಶ ಮತ್ತು ಜಿಲ್ಲೆಗೆ ಮುಜುಗರ ತರುವಂತಹ ಇಂತಹ ಕೃತ್ಯಗಳು ನಡೆಯದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ಧರಣಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಚ್.ಕೆ. ಸಂದೇಶ್, ರಾಜಶೇಖರ್, ಕೃಷ್ಣದಾಸ್, ಕಾಂಗ್ರೆಸ್‌ ಮುಖಂಡ ಅಬ್ದುಲ್ ಸಮದ್, ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್, ಹಿರಿಯ ನಾಗರಿಕರ ವೇದಿಕೆ ಬಿ.ಕೆ.ಮಂಜುನಾಥ್, ಪತ್ರಕರ್ತ ವೆಂಕಟೇಶ್, ಎಚ್‌.ಎಸ್‌.ನಾಗರಾಜು, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ, ಕೆ.ಪಿ.ಆರ್‌.ಎಸ್‌ ಜಿಲ್ಲಾ ಅಧ್ಯಕ್ಷ ಎಚ್.ಆರ್.ನವೀನ್ ಕುಮಾರ್, ಮುಬಾಶಿರ್‌ ಅಹಮದ್‌, ಕೆಪಿಸಿಸಿ ಸದಸ್ಯ ಎಚ್‌.ಕೆ.ಮಹೇಶ್‌, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ತಾರಾಚಂದನ್‌, ಲೇಖಕಿ ಸುವರ್ಣ ಶಿವಪ್ರಸಾದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...