Sunday, June 7, 2026
Sunday, June 7, 2026

ಪಾರಂಪರಿಕ ವೈದ್ಯರಿಗೆ ಕಾನೂನು ಮಾನ್ಯತೆ ಇಲ್ಲ- ಡಾ.ಸುಧಾಕರ್

Date:

ಪಾರಂಪರಿಕ ವೈದ್ಯರಿಗೆ ಕಾನೂನಿನ ಮಾನ್ಯತೆ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಆಯುಷ್‌ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ ನೀತಿ ರೂಪಿಸಿದೆ. ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲು ಅವಕಾಶವಿಲ್ಲ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಆಯುಷ್‌ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಂಪ್ರದಾಯಿಕವಾಗಿ ಆಯುರ್ವೇದವನ್ನು ಅಭ್ಯಾಸ ಮಾಡುತ್ತಿರುವವರು ಬಳ್ಳಾರಿ ಹಾಗೂ ಬೆಂಗಳೂರಿನ ಆಯುರ್ವೇದ ವಿಶ್ವವಿದ್ಯಾಲಯಗಳಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು. ಮತ್ತು ಅವರಿಗೆ ಸರ್ಕಾರ ಉಚಿತ ಸೀಟುಗಳನ್ನು ಕಾಯ್ದಿರಿಸಿದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...