Saturday, June 21, 2025
Saturday, June 21, 2025

ನ್ಯಾಟೊ ಸೇರಬೇಕೆ ಬೇಡವೆ? ಜನಮತದ ಆಧಾರದ ಮೇಲೆ ನಿರ್ಧಾರ-ಝೆಲೆನ್ಸ್ಕಿ

Date:

ರಷ್ಯಾ ಮತ್ತು ಉಕ್ರೇನ್​ ನಡುವೆ ನಡೆಯಲಿರುವ ಶಾಂತಿ ಮಾತುಕತೆ ವೇಳೆ ಉಕ್ರೇನ್​ನ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಮೊದಲ ಆದ್ಯತೆ ನೀಡುವುದಾಗಿ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ನಮಗೆ ಶೀಘ್ರವಾಗಿಯೇ ಶಾಂತಿ ಬೇಕಾಗಿದೆ. ತಡಮಾಡದೇ ಶಾಂತಿ ಮಾತುಕತೆ ನಡೆಯಬೇಕಿದೆ ಎಂದಿರುವ ಉಕ್ರೇನ್​ ಅಧ್ಯಕ್ಷರು, ಟರ್ಕಿಯಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಕಲ್ಪಿಸಬೇಕಾದ ಅವಶ್ಯಕತೆ ಇದೆ ಎಂದಿದ್ದಾರೆ.

ಮರಿಯುಪೋಲ್​ ನಗರದಲ್ಲಿ ಪರಿಸ್ಥಿತಿ ಭೀಕರವಾಗಿದೆ. ಇಂತಹ ಸನ್ನಿವೇಶಗಳ ಬಗ್ಗೆ ತಾವು ಇತರ ದೇಶಗಳ ಸಂಸತ್​ಗಳ ಗಮನಕ್ಕೆ ತರುವುದನ್ನು ಮುಂದುವರೆಸುತ್ತೇನೆ. ರಷ್ಯಾದ ಮಾರಕ ದಾಳಿಯನ್ನು ಎದುರಿಸಿ ದಿಟ್ಟ ಉತ್ತರ ನೀಡುತ್ತಿರುವ ಉಕ್ರೇನ್‌ನ ಸಶಸ್ತ್ರ ಪಡೆಗಳಿಗೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ರಷ್ಯಾ ಆಕ್ರಮಣವನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸುತ್ತಿದ್ದಾರೆ ಎಂದು ಉಕ್ರೇನ್​ ಸೈನಿಕರ ಬೆನ್ನು ತಟ್ಟಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಷ್ಯಾ ಪಡೆಗಳು ದೇಶದಿಂದ ಹೊರಹೋದ ನಂತರ ಉಕ್ರೇನ್​​​ ನಾಟೋ ಸೇರಬೇಕೇ ಬೇಡವೆ ಎಂಬ ಬಗ್ಗೆ ಜನಮತಗಣನೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಝೆಲೆನ್ಸ್ಕಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...