ಕಳೆದ ಕೆಲ ವರ್ಷಗಳಿಂದ ಖಾಲಿ ಇದ್ದಂತ ಉಪ ಲೋಕಾಯುಕ್ತ ಹುದ್ದೆಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಂ.ಫಣೀಂದ್ರ ಅವರನ್ನು ನೇಮಕ ಮಾಡಲಾಗಿತ್ತು.
ಅವರು, ಇಂದು ಉಪ ಲೋಕಾಯುಕ್ತರಾಗಿ ಪ್ರಾಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.