Wednesday, July 8, 2026
Wednesday, July 8, 2026

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಮನವಿ ಪತ್ರ ಅರ್ಪಣೆ

Date:

ಶಿವಮೊಗ್ಗ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಭಾರತ ಉಳಿಸಿ ಜನತೆಯಿಂದ ರಕ್ಷಿಸಿ ಕಾರ್ಯಕ್ರಮದಡಿಯಲ್ಲಿ ಸಂವಿಧಾನದ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ, ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಹಮ್ಮಿಕೊಂಡ ಎರಡು ದಿನಗಳ ಅಖಿಲಭಾರತ ಸಾರ್ವತ್ರಿಕ ಮುಷ್ಕರ ವನ್ನು ನಡೆಸಿ ಮಾನ್ಯ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ, ಪಾರ್ಲಿಮೆಂಟ್ ಭವನ ನವದೆಹಲಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಈ ಕೆಳಕಂಡ ಅಂಶಗಳನ್ನು ಮನವಿ ಪತ್ರ ಒಳಗೊಂಡಿತ್ತು. ಕೊರೋನ ಸಾಂಕ್ರಮಿಕ ರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿ ಸರ್ಕಾರಗಳು ವಿಧಿಸಿದ ಲಾಕ್ಡೌನ್ ನಿಂದ ದುಡಿವ ಜನರ ಬದುಕನ್ನ ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ನೀಡಿದ ಪರಿಹಾರ ಪ್ಯಾಕೇಜ್ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿ ಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು.

ಕೇಂದ್ರದ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್ ನಲ್ಲಿ ಹಣಕಾಸಿನ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರವಾಗಿ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಭಾರಿ ಪ್ರಮಾಣದ ಪರೋಕ್ಷ ಜಿಎಸ್ಟಿ ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇವು ಮತ್ತು ಕೊರೋಣ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿದ್ದು ಮಾತ್ರವಲ್ಲ, ಭಾರತವನ್ನು ಜಾಗತಿಕ ಹಸಿವು ಸೂಚ್ಯಂಕ ದಲ್ಲಿ 101 ಸ್ಥಾನಕ್ಕೆ ಇಳಿಸಿದೆ. ಇನ್ನು ಮುಂತಾದ ಅಂಶಗಳನ್ನು ಮನವಿಪತ್ರ ಒಳಗೊಂಡಿತ್ತು. ಜೊತೆಗೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರದಲ್ಲಿ ಸೂಚಿಸಲಾಗಿದೆ.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಪ್ರಧಾನ ಕಾರ್ಯದರ್ಶಿ ಸಿಐಟಿಯು ಶಿವಮೊಗ್ಗ ಜಿಲ್ಲಾ ಸಮಿತಿ ಸಂಚಾಲಕರಾದ ಎಂ. ನಾರಾಯಣ, ಜಿಲ್ಲಾ ಎ. ಐಟಿ. ಯುಸಿ ಶಿವಮೊಗ್ಗ ಅಧ್ಯಕ್ಷರಾದ ಕಾ.ಡಿ.ಸಿ.ಮಾಯಣ್ಣ, ವಿಮಾ ನೌಕರರ ಸಂಘ ಶಿವಮೊಗ್ಗ ಅಧ್ಯಕ್ಷರಾದ ಕಾ. ಜನಾರ್ಧನ್ ನಾಯಕ್ ಇನ್ನು ಮುಂತಾದವರು ಹೆಸರುಗಳನ್ನು ಈ ಪತ್ರ ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...