Tuesday, March 24, 2026
Tuesday, March 24, 2026

ಶರಾವತಿ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ನೀಡಲು ಮನವಿ

Date:

ಮಲೆನಾಡು ರೈತ ಹೋರಾಟ ಸಮಿತಿ ಶಿವಮೊಗ್ಗ ಜಿಲ್ಲೆ ವತಿಯಿಂದ ಸೊರಬ ತಾಲ್ಲೂಕು ಕಛೇರಿ ತಹಶೀಲ್ದಾರ್ ಅವರಿಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು.

ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಬಿಟ್ಟುಕೊಟ್ಟು 60 ವರ್ಷಗಳು ಕಳೆದಿವೆ. ಸೊರಬ ತಾಲೂಕಿನ ಕಾನಳ್ಳಿ ಹೊಳೆಕೊಪ್ಪ ಮೈಸಾವಿ ಗ್ರಾಮಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳಿವೆ.
2021 ಮಾರ್ಚ್ ನಲ್ಲಿ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ 9600 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ವರ್ಗಾಯಿಸುವುದನ್ನು ವಚ ಮಾಡಿರುವುದಾಗಿ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಒಂದು ವರ್ಷ ಸಮಯವಾದರು ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿಲ್ಲ. ಎನ್ನುವ ವಿಚಾರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಹದಿನೈದು ದಿನಗಳ ಒಳಗೆ ಮಲೆನಾಡು ರೈತ ಹೋರಾಟ ಸಮಿತಿಯ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕಾರಿಪುರದಲ್ಲಿ ಸಂಸತ್ ಸದಸ್ಯರ ಮನೆಯೆದುರು ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಎದುರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಅರಣ್ಯ ಭೂಮಿ ಸಾಗುವಳಿ ಕುರಿತ ಹೋಗಿದ್ದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು.
ಮಲೆನಾಡು ರೈತ ಹೋರಾಟ ಸಮಿತಿ ಸಾಗರದ ಸಂಚಾಲಕರಾದ ತೀ.ನಾ. ಶ್ರೀನಿವಾಸನವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...