Wednesday, July 8, 2026
Wednesday, July 8, 2026

ಶರಾವತಿ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ನೀಡಲು ಮನವಿ

Date:

ಮಲೆನಾಡು ರೈತ ಹೋರಾಟ ಸಮಿತಿ ಶಿವಮೊಗ್ಗ ಜಿಲ್ಲೆ ವತಿಯಿಂದ ಸೊರಬ ತಾಲ್ಲೂಕು ಕಛೇರಿ ತಹಶೀಲ್ದಾರ್ ಅವರಿಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಮಂಜೂರಾತಿ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು.

ಶರಾವತಿ ವಿದ್ಯುತ್ ಯೋಜನೆಗೆ ಭೂಮಿ ಬಿಟ್ಟುಕೊಟ್ಟು 60 ವರ್ಷಗಳು ಕಳೆದಿವೆ. ಸೊರಬ ತಾಲೂಕಿನ ಕಾನಳ್ಳಿ ಹೊಳೆಕೊಪ್ಪ ಮೈಸಾವಿ ಗ್ರಾಮಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳಿವೆ.
2021 ಮಾರ್ಚ್ ನಲ್ಲಿ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರ 9600 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ವರ್ಗಾಯಿಸುವುದನ್ನು ವಚ ಮಾಡಿರುವುದಾಗಿ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಒಂದು ವರ್ಷ ಸಮಯವಾದರು ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿಲ್ಲ. ಎನ್ನುವ ವಿಚಾರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಹದಿನೈದು ದಿನಗಳ ಒಳಗೆ ಮಲೆನಾಡು ರೈತ ಹೋರಾಟ ಸಮಿತಿಯ ಕೆಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕಾರಿಪುರದಲ್ಲಿ ಸಂಸತ್ ಸದಸ್ಯರ ಮನೆಯೆದುರು ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಎದುರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಅರಣ್ಯ ಭೂಮಿ ಸಾಗುವಳಿ ಕುರಿತ ಹೋಗಿದ್ದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಯಿತು.
ಮಲೆನಾಡು ರೈತ ಹೋರಾಟ ಸಮಿತಿ ಸಾಗರದ ಸಂಚಾಲಕರಾದ ತೀ.ನಾ. ಶ್ರೀನಿವಾಸನವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...