Friday, February 6, 2026
Friday, February 6, 2026

ಅಮೃತ ಮಹೋತ್ಸವ ನಿಮಿತ್ತ ವಿಶೇಷ ಕಾರ್ಯಕ್ರಮ ಮೋದೀಜಿ ಸಂಸದರಿಗೆ ಸೂಚನೆ

Date:

ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಆಯಾ ಸಂಸದೀಯ ಕ್ಷೇತ್ರಗಳಲ್ಲಿ 75 ಕೊಳಗಳನ್ನು ನಿರ್ಮಿಸುವಂತೆ ಎಲ್ಲ ಪಕ್ಷದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ.

ಇಂದು ನವದೆಹಲಿಯ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಸಂಸ್ಥಾಪನಾ ದಿನವಾದ ಏಪ್ರಿಲ್ 6 ರಿಂದ ಏಪ್ರಿಲ್ 14 ರವರೆಗೆ ಅಂಬೇಡ್ಕರ್ ಜಯಂತಿ ಹೀಗೆ ಎಲ್ಲಾ ಜಯಂತಿಗಳನ್ನು ಆಚರಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಬಡವರ ಕಲ್ಯಾಣಕ್ಕಾಗಿ ಸರ್ಕಾರದ ಕೆಲಸ
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯ ಅವಧಿಯನ್ನು 6 ತಿಂಗಳವರೆಗೆ ವಿಸ್ತರಿಸಿರುವ ಕುರಿತು ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರವು ತಳಮಟ್ಟದ ಬಡವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಅದರ ಮಾಹಿತಿ ಎಲ್ಲರಿಗೂ ತಲುಪಬೇಕು. ಇನ್ನು ಸರ್ಕಾರ, ಎಲ್ಲಾ ಮಾಜಿ ಪ್ರಧಾನಿಗಳ ಕೊಡುಗೆಯನ್ನ ಬಿಜೆಪಿ ಗೌರವಿಸುತ್ತದೆ. ಆದ್ದರಿಂದ ಸರ್ಕಾರವು ಎಲ್ಲಾ ಮಾಜಿ ಪ್ರಧಾನಿಗಳ ಕೊಡುಗೆಗಾಗಿ ಮ್ಯೂಸಿಯಂ ಸಹ ನಿರ್ಮಿಸಲಾಗುತ್ತಿದೆ ಎಂದರು.

ಪ್ರಧಾನಿ ಮೋದಿ ಅವರಿಗೆ ಸಂಸದರಿಂದ ಕೃತಜ್ಞತೆ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಅವಧಿಯನ್ನು 6 ತಿಂಗಳು ವಿಸ್ತರಿಸುವ ನಿರ್ಧಾರಕ್ಕೆ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎಲ್ಲಾ ಸಂಸದರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹೇಳಿದ್ದಾರೆ.

ಏಪ್ರಿಲ್ 6 ರಿಂದ 14 ರವರೆಗೆ ಈ ಕಾರ್ಯಕ್ರಮ
ಪ್ರಧಾನಿ ಮೋದಿ ಅವರ ಭಾಷಣವನ್ನ ವಿವರಿಸಿದ ಮೇಘವಾಲ್, ಪಕ್ಷದ ಸಂಸ್ಥಾಪನಾ ದಿನವಾದ ಅಂಬೇಡ್ಕರ್ ಜಯಂತಿಯ ಏಪ್ರಿಲ್ 6 ರಿಂದ ಏಪ್ರಿಲ್ 14 ರವರೆಗೆ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸುವಂತೆ ಪ್ರಧಾನಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಬ್ಬರೂ ಸಂಸದರಿಗೆ ಸೂಚನೆ ನೀಡಿದ್ದಾರೆ.

ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನ, ಏಪ್ರಿಲ್ 11 ರಂದು ಜ್ಯೋತಿಬಾ ಫುಲೆ ಅವರ ಜನ್ಮದಿನ ಮತ್ತು ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ.

ಇದೇ ಸಂದರ್ಭದಲ್ಲಿ ರಾಮನವಮಿ ಮತ್ತು ಹೊಸ ವರ್ಷವೂ ಇದೆ. ಈ ಸಂದರ್ಭದಲ್ಲಿ ಎಲ್ಲ ಸಂಸದರು ಸಾಮಾಜಿಕ ನ್ಯಾಯದ ಕುರಿತು ವಿವಿಧ ಹಂತಗಳಲ್ಲಿ ಸಭೆ ನಡೆಸಿ, ಸರ್ಕಾರದ ಕೆಲಸ, ಸಾಧನೆಗಳನ್ನ ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯಲು ಹಾಗೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸುವಂತೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...