Wednesday, May 13, 2026
Wednesday, May 13, 2026

ಬಡವರ ಸಬಲೀಕರಣ ಬಡತನದ ವಿರುದ್ಧ ಹೋರಾಟಕ್ಕೆ ಧೈರ್ಯ-ಪ್ರಧಾನಿ

Date:

ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ವಾಸ್ತವ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.

ಬಡವರು ಸಬಲೀಕರಣಗೊಂಡರೆ ಬಡತನದ ವಿರುದ್ಧ ಹೋರಾಡುವ ಧೈರ್ಯ ಬರುತ್ತದೆ. ಸರ್ಕಾರ ಮತ್ತು ಬಡವರ ಪ್ರಯತ್ನಗಳು ಒಟ್ಟಿಗೆ ಸೇರಿದಾಗ ಬಡತನ ಹೋಗಲಾಡಿಸಬಹುದು ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮಗಳಲ್ಲಿ ನಿರ್ಮಿಸಲಾದ ಈ 5 ಲಕ್ಷದ 21 ಸಾವಿರ ಮನೆಗಳು ಕೇವಲ ಮನೆಗಳಲ್ಲ. ದೇಶದ ಬಡವರು ಸಬಲರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಡವರಿಗೆ ಪಕ್ಕಾ ಮನೆ ನೀಡುವ ಅಭಿಯಾನ ಕೇವಲ ಸರಕಾರದ ಯೋಜನೆಯಾಗದೆ ಗ್ರಾಮಸ್ಥರಲ್ಲಿ ಹಾಗೂ ಬಡವರಲ್ಲಿ ನಂಬಿಕೆ ಮೂಡಿಸುವ ಬದ್ಧತೆಯಾಗಿದೆ ಎಂದರು.

ಬಡತನದ ಸಂಕೋಲೆಯಿಂದ ಹೊರ ಬರಲು ಬಡವರನ್ನು ಪ್ರೋತ್ಸಾಹಿಸಲು ಇದು ಮೊದಲ ಹೆಜ್ಜೆಯಾಗಿದೆ ಎಂದರು.
ದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಮನೆಗಳಲ್ಲಿ ಮಹಿಳೆಯರು ಸುಮಾರು ಎರಡು ಕೋಟಿ ಮನೆಗಳ ಮಾಲೀಕತ್ವವನ್ನು ಹೊಂದಿದ್ದಾರೆ. ಈ ಮಾಲೀಕತ್ವವು ಮನೆಯ ಇತರ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲಪಡಿಸಿದೆ ಎಂದರು.

ಸರ್ಕಾರ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸಲು ಮುಂದಾಗಿದೆ. ಈ ಯೋಜನೆಯಡಿ ಕಳೆದ ಎರಡೂವರೆ ವರ್ಷಗಳಲ್ಲಿ ದೇಶಾದ್ಯಂತ 6 ಕೋಟಿಗೂ ಹೆಚ್ಚು ಕುಟುಂಬಗಳು ಶುದ್ಧ ಕುಡಿಯುವ ನೀರಿನ ಸಂಪರ್ಕ ಪಡೆದಿವೆ.

ಕೊರೊನಾ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಉಚಿತ ಪಡಿತರಕ್ಕಾಗಿ 2 ಲಕ್ಷ 60 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದು, ಮುಂದಿನ 6 ತಿಂಗಳಲ್ಲಿ 80 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...