Monday, December 15, 2025
Monday, December 15, 2025

ಯುದ್ಧ ಕಾರ್ಯಾಚರಣೆ ಕಡಿತಗೊಳಿಸದ ರಷ್ಯಉಕ್ರೇನ್ ಆತಂಕ

Date:

ದಕ್ಷಿಣ ಉಕ್ರೇನ್‌ನ ಮೈಕೊಲೈವ್‌ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ಮಂಗಳವಾರ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.ಇದರೊಂದಿಗೆ 33 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 ಮಹಡಿ ಕಟ್ಟಡದ ಮೇಲೆ ದಾಳಿ ನಡೆದಿತ್ತು. ಕಟ್ಟಡವು ಸಂಪೂರ್ಣವಾಗಿ ಧ್ವಂಸಗೊಂಡಿದೆ. 12 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಈ ದಾಳಿಯನ್ನು ಖಂಡಿಸಿದ್ದಾರೆ.
‘ಮೈಕೊಲೈವ್‌ ಜನರಿಂದ ರಷ್ಯಾಕ್ಕೆ ಯಾವುದೇ ಬೆದರಿಕೆ ಇಲ್ಲ. ಕಾರಣವಿಲ್ಲದೆ ಉಕ್ರೇನ್ ಜನರ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಯುದ್ಧ ಕೊನೆಗೊಳಿಸುವ ಉದ್ದೇಶದಿಂದ ಮಾತುಕತೆಗಳಲ್ಲಿ ಪರಸ್ಪರ ನಂಬಿಕೆ ಹೆಚ್ಚಿಸಲು ಉಕ್ರೇನ್‌ ರಾಜಧಾನಿ ಕೀವ್‌ ಮತ್ತು ಇನ್ನೊಂದು ಪ್ರಮುಖ ನಗರ ಚೆರ್ನಿವ್‌ ಬಳಿ ಸೇನಾ ಕಾರ್ಯಾಚರಣೆಗಳನ್ನು ನಿಯಮಿತವಾಗಿ ಕಡಿತಗೊಳಿಸಲು ಮಾಸ್ಕೊ ನಿರ್ಧರಿಸಿದೆ ಎಂದು ರಷ್ಯಾದ ರಕ್ಷಣಾ ಉಪ ಸಚಿವ ಅಲೆಕ್ಸಾಂಡರ್‌ ಫೊಮಿನ್‌ ಹೇಳಿದ್ದರು.
ಅದೇ ದಿನ ಮೈಕೊಲೈವ್‌ ಮೇಲೆ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...