Tuesday, February 3, 2026
Tuesday, February 3, 2026

ಯುದ್ಧ ಕಾರ್ಯಾಚರಣೆ ಕಡಿತಗೊಳಿಸದ ರಷ್ಯಉಕ್ರೇನ್ ಆತಂಕ

Date:

ದಕ್ಷಿಣ ಉಕ್ರೇನ್‌ನ ಮೈಕೊಲೈವ್‌ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ಮಂಗಳವಾರ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.ಇದರೊಂದಿಗೆ 33 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 ಮಹಡಿ ಕಟ್ಟಡದ ಮೇಲೆ ದಾಳಿ ನಡೆದಿತ್ತು. ಕಟ್ಟಡವು ಸಂಪೂರ್ಣವಾಗಿ ಧ್ವಂಸಗೊಂಡಿದೆ. 12 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಈ ದಾಳಿಯನ್ನು ಖಂಡಿಸಿದ್ದಾರೆ.
‘ಮೈಕೊಲೈವ್‌ ಜನರಿಂದ ರಷ್ಯಾಕ್ಕೆ ಯಾವುದೇ ಬೆದರಿಕೆ ಇಲ್ಲ. ಕಾರಣವಿಲ್ಲದೆ ಉಕ್ರೇನ್ ಜನರ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಯುದ್ಧ ಕೊನೆಗೊಳಿಸುವ ಉದ್ದೇಶದಿಂದ ಮಾತುಕತೆಗಳಲ್ಲಿ ಪರಸ್ಪರ ನಂಬಿಕೆ ಹೆಚ್ಚಿಸಲು ಉಕ್ರೇನ್‌ ರಾಜಧಾನಿ ಕೀವ್‌ ಮತ್ತು ಇನ್ನೊಂದು ಪ್ರಮುಖ ನಗರ ಚೆರ್ನಿವ್‌ ಬಳಿ ಸೇನಾ ಕಾರ್ಯಾಚರಣೆಗಳನ್ನು ನಿಯಮಿತವಾಗಿ ಕಡಿತಗೊಳಿಸಲು ಮಾಸ್ಕೊ ನಿರ್ಧರಿಸಿದೆ ಎಂದು ರಷ್ಯಾದ ರಕ್ಷಣಾ ಉಪ ಸಚಿವ ಅಲೆಕ್ಸಾಂಡರ್‌ ಫೊಮಿನ್‌ ಹೇಳಿದ್ದರು.
ಅದೇ ದಿನ ಮೈಕೊಲೈವ್‌ ಮೇಲೆ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...