Monday, December 15, 2025
Monday, December 15, 2025

ಯುದ್ಧ ಕಾರ್ಯಾಚರಣೆ ಕಡಿತಗೊಳಿಸದ ರಷ್ಯಉಕ್ರೇನ್ ಆತಂಕ

Date:

ದಕ್ಷಿಣ ಉಕ್ರೇನ್‌ನ ಮೈಕೊಲೈವ್‌ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ಮಂಗಳವಾರ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.ಇದರೊಂದಿಗೆ 33 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 ಮಹಡಿ ಕಟ್ಟಡದ ಮೇಲೆ ದಾಳಿ ನಡೆದಿತ್ತು. ಕಟ್ಟಡವು ಸಂಪೂರ್ಣವಾಗಿ ಧ್ವಂಸಗೊಂಡಿದೆ. 12 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಈ ದಾಳಿಯನ್ನು ಖಂಡಿಸಿದ್ದಾರೆ.
‘ಮೈಕೊಲೈವ್‌ ಜನರಿಂದ ರಷ್ಯಾಕ್ಕೆ ಯಾವುದೇ ಬೆದರಿಕೆ ಇಲ್ಲ. ಕಾರಣವಿಲ್ಲದೆ ಉಕ್ರೇನ್ ಜನರ ಮೇಲೆ ರಷ್ಯಾ ಪಡೆಗಳು ದಾಳಿ ನಡೆಸುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಯುದ್ಧ ಕೊನೆಗೊಳಿಸುವ ಉದ್ದೇಶದಿಂದ ಮಾತುಕತೆಗಳಲ್ಲಿ ಪರಸ್ಪರ ನಂಬಿಕೆ ಹೆಚ್ಚಿಸಲು ಉಕ್ರೇನ್‌ ರಾಜಧಾನಿ ಕೀವ್‌ ಮತ್ತು ಇನ್ನೊಂದು ಪ್ರಮುಖ ನಗರ ಚೆರ್ನಿವ್‌ ಬಳಿ ಸೇನಾ ಕಾರ್ಯಾಚರಣೆಗಳನ್ನು ನಿಯಮಿತವಾಗಿ ಕಡಿತಗೊಳಿಸಲು ಮಾಸ್ಕೊ ನಿರ್ಧರಿಸಿದೆ ಎಂದು ರಷ್ಯಾದ ರಕ್ಷಣಾ ಉಪ ಸಚಿವ ಅಲೆಕ್ಸಾಂಡರ್‌ ಫೊಮಿನ್‌ ಹೇಳಿದ್ದರು.
ಅದೇ ದಿನ ಮೈಕೊಲೈವ್‌ ಮೇಲೆ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...