ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.
ಕರೆ ಮಾಡಿದ 72 ತಾಸಿನಲ್ಲಿ ರೈತರ ಮನೆ ಬಾಗಿಲಿಗೆ ಪಹಣಿ ರವಾನೆ ಮಾಡುವ ಕಾರ್ಯಕ್ರಮ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸದನದಲ್ಲಿ ಬಿಜೆಪಿಯ ಪಿ.ಎ. ಮುನಿರಾಜು ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂದಾಯ ಇಲಾಖೆ ಶೀಘ್ರದಲ್ಲಿ ಆರಂಭಿಸಲಿರುವ ಸಹಾಯವಾಣಿಗೆ ಕರೆ ಮಾಡಿದ 72 ಗಂಟೆಯೊಳಗಾಗಿ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ತಲುಪಿಸುವ ಯೋಜನೆ ಜಾರಿ ತರಲಾಗುವುದು ಎಂದರು.
ಇದಕ್ಕಾಗಿ ಹೊಸ ಸಾಫ್ಟ್ ವೇರ್ ಕೂಡ ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.