Monday, February 2, 2026
Monday, February 2, 2026

ಹುಂಚ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಲು ಕ್ಷಣಗಣನೆ- ಡಾ.ಸೆಲ್ವಮಣಿ

Date:

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ನಿರ್ಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ 582 ಪ್ರಕರಣಗಳಲ್ಲಿ 64460 ರೂ. ದಂಡ ವಸೂಲು ಮಾಡಲಾಗಿದೆ.

ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ದಾಳಿಗಳನ್ನು ಹೆಚ್ಚಿಸಬೇಕು. ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಮಾತ್ರವಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.

ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ನೀಡಬಾರದು. ತಂಬಾಕು ಉತ್ಪನ್ನಗಳ ಕುರಿತಾಗಿ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತಿಗೆ ಅವಕಾಶ ನೀಡಬಾರದು. ಶಾಲಾ ಕಾಲೇಜುಗಳ ಆವರಣದಲ್ಲಿ ರಾತ್ರಿ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಂಬಾಕು ವ್ಯಸನ ಮುಕ್ತ ಕೇಂದ್ರ ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ ಕೇವಲ 3908 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಮನೋ ಚೈತನ್ಯ ಕಾರ್ಯಕ್ರಮದಡಿಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಸಹ ತಂಬಾಕು ವ್ಯಸನ ಮುಕ್ತ ಕೌನ್ಸಿಲಿಂಗ್ ವ್ಯವಸ್ಥೆ ಮಾಡಬೇಕು. ತಂಬಾಕು ಚಟದಿಂದ ಮುಕ್ತರಾದರೆ ಬೇರೆ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆ ಕಡಿಮೆ ಎಂದು ಅವರು ಅಭಿಯಪ್ರಾಯಪಟ್ಟರು.

ಹೊಸನಗರ ತಾಲೂಕಿನ ಹುಂಚ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಇದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಕ್ರಮ ವಹಿಸಬೇಕು ಎಂದರು.

ರೇಬಿಸ್ ಲಸಿಕೆ ಕಡ್ಡಾಯವಾಗಿ ಹಾಕಿ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ರೇಬಿಸ್‌ಗೆ ಇಬ್ಬರು ಬಲಿಯಾಗಿರುವುದು ಕಳವಳಕಾರಿ. ಜಿಲ್ಲೆಯಲ್ಲಿ ಪ್ರತಿಯೊಂದು ಸಾಕಿದ ನಾಯಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಬೇಕು. ಪಶುವೈದ್ಯಕೀಯ ಇಲಾಖೆ ಈ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು. ಬೀದಿನಾಯಿಗಳನ್ನು ನಿಯಂತ್ರಣ ಮಾಡುವ ಕುರಿತು ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಜರುಗಿಸಬೇಕು ಎಂದರು.

ಪ್ರತಿಯೊಂದು ಆಸ್ಪತ್ರೆಯಲ್ಲಿ ರೇಬಿಸ್ ವ್ಯಾಕ್ಸಿನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಆರ್‌ಸಿಎಚ್ ಅಧಿಕಾರಿ ಡಾ. ನಾಗರಾಜ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...