Sunday, May 3, 2026
Sunday, May 3, 2026

ಇಲ್ನೋಡಿ ಇವತ್ತು ಇಡ್ಲಿ ದಿನ

Date:

ಈಗೀಗ ಎಲ್ಲರಿಗೂ ,ಎಲ್ಲವಕ್ಕೂ ಒಂದು ದಿನವನ್ನ ಆಚರಿಸುವ ರೂಢಿ ಬಂದಿದೆ. ಏನಿಲ್ಲ ಅಂದರೂ ಆವತ್ತೊಂದು ದಿನ ಅವರ,ಅದರ ಬಗ್ಗೆ ಒಂದಿಷ್ಟು
ಹೊತ್ತು ಮಾತಾಡುವುದು . ಒಂದು ಸಮಾರಂಭ ಏರ್ಪಡಿಸುವುದು ಸರ್ವೇಸಾಮಾನ್ಯ ಸಂಗತಿ.
ನಮ್ಮ ನಿಮ್ಮ ಗಮನ ಈಗ ಹೊರಳಬೇಕಾದದ್ದು ನಮಗೆಲ್ಲಾ ಪ್ರೀಯವಾದ ತಿಂಡಿ ಪದಾರ್ಥ ಇಡ್ಲಿ ಬಗ್ಗೆ.

2015 ರಲ್ಲಿ ಚೆನೈನ ಬಾಣಸಿಗ ಎನಿಯವನ್ ಎಂಬ ಮಹಾನುಭಾವ ಈ ಇಡ್ಲಿಗೆ ಒಂದು ದಿನ ಇರಲಿ ಎಂದು ಆಚರಣೆ ಶುರುಮಾಡಿದನಂತೆ.ಆತ ಸಾಮಾನ್ಯ ಅಂದುಕೋ ಬೇಡಿ.ಇಡ್ಲಿಯ ವೆರೈಟಿಯಲ್ಲೇ ಸು 1328  ತರಹ ಇಡ್ಲಿ ಬೇಯಿಸಿ ತೋರಿಸಿದ ಭೂಪ.

ದಕ್ಷಿಣ ಭಾರತದ ಅತ್ಯಂತ ಜನಪ್ರಿಯ,ನಾಲಗೆ ಪ್ರಿಯ ತಿಂಡಿ ಅಂದರೆ
ಇಡ್ಲಿ ಸಾಂಬಾರ್. ಎಂತಹ ಆರೋಗ್ಯದ ತೊಂದರೆ ಇರಲಿ ಸಾಮಾನ್ಯವಾಗಿ ವೈದ್ಯರು ಸೂಚಿಸುವುದು ಇಡ್ಲಿ ತಿನ್ನಿ ಪರವಾಗಿಲ್ಲ.ಏಕೆಂದರೆ ಎಣ್ಣೆ, ಬೆಣ್ಣೆ ರಹಿತ
ಕೇವಲ ಆವಿಯಲ್ಲೇ ಬೇಯುತ್ತದೆ. ಅದರ ಮೃದುತ್ವ ಮಧುರತೆ ತಿನ್ನುವವರೇ ಹೇಳಬೇಕು.
ಬಗೆಬಗೆಯ ಇಡ್ಲಿ ಮಾಡುವ ಕಲಾವಂತ ಬಾಣಸಿಗರೂ ಈಗ ಎಲ್ಲ ಕ್ಯಾಂಟೀನ್ ,ರೆಸ್ಟುರಾ ಗಳಲ್ಲಿ ಸಿಗುತ್ತಾರೆ. ಯಾರೇ ಆಗಿರಲಿ ಸ್ವಯಂ ಉದ್ಯೋಗದ ಕ್ಯಾಂಟೀನ್ ತೆರೆದರೆ ಅಲ್ಲಿ ಇಡ್ಲಿ ಬಿಟ್ಟು ಬೇರೆ ಏನೂ ಆರಂಭದಲ್ಲಿ ಮಾಡುವುದಿಲ್ಲ. ಇಡ್ಲಿ ಸಾಂಬಾರ್ ತಯಾರಿಸಿದರೇ ಮಾತ್ರ ಗಿರಾಕಿಗಳು
ಬರುವುದು. ಈ ದೃಶ್ಯ  ನಮ್ಮಲ್ಲಿ ಸಾಮಾನ್ಯ.

ಏನೇ ಆಗಲಿ ಇಡ್ಲಿಗೆ ಅಂತ ಒಂದು ದಿನ ಆಚರಣೆಗೆ ಮೀಸಲಿಟ್ಟರಲ್ಲ 
ಆ ಮಹಾಶಯ ಎನಿಯವನ್ ಗೆ ನಮೋನಮಃ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...