Wednesday, July 8, 2026
Wednesday, July 8, 2026

ರಷ್ಯ ವಿರುದ್ಧ ಸಾಮೂಹಿಕ ಖಂಡನೆ ಬ್ಲಿಂಕೆನ್ ಅಭಿಮತ

Date:

ಉಕ್ರೇನ್ ನಲ್ಲಿ ಹದಗೆಡುತ್ತಿರುವ ಮಾನವೀಯ ಪರಿಸ್ಥಿತಿಗಳು ಮತ್ತು ಪ್ರಾದೇಶಿಕ ಆದ್ಯತೆಗಳ ಕುರಿತು ಯುಎಸ್‌ ರಾಜ್ಯ ಕಾರ್ಯದರ್ಶಿ ಆಯಂಟೊನಿ ಬ್ಲಿಂಕೆನ್‌ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ನಿನ್ನೆ ಮಾತನಾಡಿದ್ದಾರೆ.

ಈ ಬಗ್ಗೆ ಯುಎಸ್‌ ರಾಜ್ಯ ಸಚಿವಾಲಯದ ವಕ್ತಾರ ನೆಡ್‌ ಪ್ರೈಸ್ ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಲ್ಲಿ ಮಾನವೀಯ ಪರಿಸ್ಥಿತಿ ಹಾಗೂ ಮುಕ್ತ, ಸುರಕ್ಷಿತ, ಸಮೃದ್ಧ ಇಂಡೊ-ಪೆಸಿಫಿಕ್‌ಗೆ ಉತ್ತೇಜನ ಸೇರಿದಂತೆ ಪ್ರಾದೇಶಿಕ ಆದ್ಯತೆಗಳ ಕುರಿತು ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಬ್ಲಿಂಕನ್‌ ಅವರು ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಮೂರು ರಾಷ್ಟ್ರಗಳ ಭೇಟಿಯನ್ನು ಬುಧವಾರ ಪೂರ್ಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, ಉಕ್ರೇನ್‌ ಮೇಲಿನ ರಷ್ಯಾದ ಆಕ್ರಮಣದ ಪರಿಣಾಮಗಳನ್ನು ‌ಉತ್ತರ ಆಫ್ರಿಕಾ ಮತ್ತು ಮಧ್ಯಪ್ರಾಚ್ಯದ ದೇಶಗಳು ಅನುಭವಿಸಿವೆ ಎಂದು ಹೇಳಿದ್ದಾರೆ. ಹಾಗೆಯೇ, ರಷ್ಯಾದೊಂದಿಗಿನ ಬಾಂಧವ್ಯವನ್ನು ಮಿತಿಗೊಳಿಸಬೇಕು ಎಂದು ಅಲ್ಜೀರಿಯಾಗೆ ಮನವಿ ಮಾಡಿದ್ದಾರೆ.

ಜೈಶಂಕರ್‌ ಅವರೊಂದಿಗೆ ಕಳೆದ ತಿಂಗಳು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ಬ್ಲಿಂಕೆನ್, ರಷ್ಯಾದ ಆಕ್ರಮಣವನ್ನು ಬಲವಾಗಿ ಖಂಡಿಸಿ ಸಾಮೂಹಿಕ ಪ್ರತಿಕ್ರಿಯೆ ನೀಡಬೇಕಿದೆ ಎಂದು ಒತ್ತಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...