Sunday, August 23, 2026
Sunday, August 23, 2026

ಸಚಿವ ಈಶ್ವರಪ್ಪ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿನ್ಯಾಯಾಲಯ ಆದೇಶ

Date:

ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪನವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ‌ ಆದೇಶಿಸಿದೆ. ಸಚಿವ‌ ಈಶ್ವರಪ್ಪ‌ ತನಿಖೆ ನಡೆಸುವಂತೆ ಶಿವಮೊಗ್ಗದ‌ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ.

ಶಿವಮೊಗ್ಗ ನಗರದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ಪ್ರಚೋಧನಾಕಾರಿ ಹೇಳಿಕೆ ಸಂಬಂದ ಖಾಸಗಿ ದೂರು ದಾಖಲಾಗಿತ್ತು.

ಹರ್ಷ ಹತ್ಯೆ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪರಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ , ಅವರನ್ನು ದಮನ ಮಾಡುತ್ತೇವೆ ಎಂದು ಈಶ್ವರಪ್ಪ ಅವರು ಹೇಳಿಕೆ ನೀಡಿದ್ದು. ಈ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

ಈ ಸಂಬಂದ ಸಚಿವ ಕೆ.ಎಸ್.ಈಶ್ವರಪ್ಪ , ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರೂ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಲಾಗಿತ್ತು.

ಶಿವಮೊಗ್ಗದ ರಿಯಾಝ್ ಅಹ್ಮದ್ ಅರ್ಜಿ ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದರು.
ಕೆ. ಎಸ್.ಈಶ್ವರಪ್ಪ , ಚನ್ನಬಸಪ್ಪ ವಿರುದ್ಧ 124 ( ಎ ) , 153 ( ಎ ) , 153 ( ಬಿ ) , 295 ( ಎ ) , 295 ( ಬಿ ) , 505 ( 2 ) , ಮತ್ತು 504 ಆರ್ / ಡಬ್ಲ್ಯೂ ಸೆಕ್ಷನ್ 34 ಆಫ್ ಐಪಿಸಿ ಕಲಂಗಳಡಿ ಪ್ರಕರಣವನ್ನು ದಾಖಲಿಸುವಂತೆ ಮನವಿ ಮಾಡಲಾಗಿತ್ತು. ಈ ಸಂಬಂದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪ್ರೀತ್ ಅವರು ತನಿಖೆ ನಡೆಸುವಂತೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸರಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...