Friday, October 4, 2024
Friday, October 4, 2024

ಸಮಕಾಲೀನ ತಲ್ಲಣ ಮತ್ತು ಸಂಕಷ್ಟಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿಲ್ಲ-ಸಾಯಿನಾಥ್

Date:

ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್ ಆತಂಕ ವ್ಯಕ್ತಪಡಸಿದರು.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಡಾ. ಶಾಂತಿನಾಥ ದೇಸಾಯಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು, 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ ನೀಡಿದರು.

ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದೆ.

ಪ್ರಸ್ತುತ ಅವುಗಳ ಸಂಖ್ಯೆ 62ರಷ್ಟಿದೆ. ಕೋವಿಡ್ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು.

ಕೋವಿಡ್‌ನ ಮೊದಲ 12 ತಿಂಗಳುಗಳಲ್ಲಿ ಭಾರತದ ಜಿ.ಡಿ.ಪಿ. ಶೇ. 7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು. ಆದರೆ ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ. 22ರಷ್ಟು ಏರಿಕೆಯಾಯಿತು.

ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲ ಎಂದು ಟೀಕಿಸಿದರು.

ಜಾಗತಿಕ ಪತ್ರಿಕಾ ಸ್ವಾತಂತ್ರ‍್ಯ ಸೂಚಿಯಲ್ಲಿ ಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆದರೆ ಬಿಲಿಯನೇರ್‌ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ.

ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶಾದಿಸಿದರು.

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಡಾ. ನವೀನ್ ಕುಮಾರ್, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ನಾಗ್ಯಾನಾಯ್ಕ್ ಮಾತನಾಡಿದರು.

ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಬಾಲ ಗಂಗಾಧರ್ ತಿಲಕ್ ಸೇರಿದಂತೆ ಅನೇಕರು ಮಹಾನ್ ಪತ್ರಕರ್ತರಾಗಿದ್ದರು.

ಪ್ರತಿದಿನವೂ ಸ್ವಾತಂತ್ರ ಹೋರಾಟ, ರಾಜಕೀಯ, ಸಾಮಾಜಿಕ ಸುಧಾರಣೆಗಳ ಕುರಿತು ಯತೇಚ್ಛವಾದ ಬರಹಗಳನ್ನು ಪ್ರಕಟಿಸುತ್ತಿದ್ದರು. ಅಂದು ಮಾಧ್ಯಮ ಬಹಳ ಸಣ್ಣ ಪ್ರಮಾಣದಲ್ಲಿತ್ತು ಆದರೆ ಅದು ಅಶಿಕ್ಷಿತರನ್ನೂ ಸೇರಿ ಎಲ್ಲರನ್ನು ತಲುಪುವ ಮೂಲಕ ಹೋರಾಟ, ಸುಧಾರಣೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುತ್ತಿತ್ತು.

ಆದರೆ ಇಂದು ಬೃಹತ್ ಅಗಿ ಬೆಳೆದಿರುವ ಮಾಧ್ಯಮ ತುಂಬಾ ಸಣ್ಣ ಪ್ರಮಾಣದಲ್ಲಿ ಸಮಾಜ ಸುಧಾರಣೆ ತರಲು ಆಗದೇ ಒದ್ದಾಡುತ್ತಿದೆ. ಸರ್ಕಾರಗಳ ತುತ್ತೂರಿಯಾಗಿದೆ. ಮಾಧ್ಯಮಗಳ ಕಾರ್ಪೋರೇಟ್ ಒಡೆತನ ಮತ್ತು ಸಂಪಾದಕ ಸ್ಥಾನಗಳಲ್ಲಿ ಕೇವಲ ಉನ್ನತ ಜಾತಿಯ ಜನರ ಏಕಸ್ವಾಮ್ಯತೆಯಿಂದಾಗಿ ಸಮಾಜದ ಜ್ವಲಂತ ಸಮಸ್ಯೆಗಳು ವರದಿಯಾಗುವುದಿಲ್ಲ. ಕೇವಲ ಶ್ರೀಮಂತರ, ಉಳ್ಳವರ ಸಂಬಂಧಿ ವಿಷಯಗಳು, ಅವರ ಅಗತ್ಯಗಳನ್ನು ಪೂರೈಸುವ ವರದಿಗಳನ್ನು ನೀಡುತ್ತಿರುವ ಮಾಧ್ಯಮಗಳು ಮ್ಯಾಕ್‌ಡೊನಾಲ್ಡೈಸೇಶನ್ ಪ್ರಕ್ರಿಯೆಗೆ ಒಳಗಾಗಿವೆ ಎಂದು ಸಾಯಿನಾಥ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ. ಎನ್. ಮೋಹನ್, ವಿಭಾಗದ ಡಾ. ರೇಚಲ್ ಬಾರಿ, ಡಾ. ರಾಮ್ ಪ್ರಸಾದ್, ಡಾ. ಪೂರ್ಣಾನಂದ, ಡಾ. ವೀಣಾ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...