Saturday, May 16, 2026
Saturday, May 16, 2026

ಯುದ್ಧ ನಿಲ್ಲಿಸುವಂತೆ ರಷ್ಯ ವಿದೇಶಾಂಗ ಸಚಿವರಿಗೆ ಪ್ರಧಾನಿ ಮನವಿ

Date:

ರಷ್ಯಾ- ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸುವಂತೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾವನ್ನು ಆಗ್ರಹಿಸಿದ್ದಾರೆ.

2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್‌ ಜತೆ ಪ್ರಧಾನಿ ಮೋದಿ ಸುಮಾರು 40 ನಿಮಿಷ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಯುದ್ಧ ಕೊನೆಗಾಣಿಸುವಂತೆ ಮೋದಿ, ಸರ್ಗಿ ಯವರಲ್ಲಿ ಮನವಿ ಮಾಡಿದ್ದಾರೆ. ಯುದ್ಧ ನಿಲ್ಲಿಸುವ ನಿಟ್ಟಿ ನಲ್ಲಿ ಕೈಗೊಳ್ಳಲಾಗುವ ಶಾಂತಿ ಮಾತುಕತೆಯನ್ನು ಭಾರತ ಬೆಂಬಲಿಸುತ್ತದೆ ಎಂದೂ ಹೇಳಿದ್ದಾರೆ.

ಉಕ್ರೇನ್‌-ರಷ್ಯಾ ನಡುವೆ ಶಾಂತಿ ಸ್ಥಾಪನೆಗಾಗಿ ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಬಂದರೆ ಅದಕ್ಕೆ ಭಾರತ ಸಿದ್ಧವಿರುವ ವಿಚಾರವನ್ನು ಮೋದಿಯವರು, ಸರ್ಗಿಯವರಿಗೆ ತಿಳಿಸಿದ್ದಾರೆಂದು ಹೇಳಲಾಗಿದೆ.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಗಿ, ಉಕ್ರೇನ್‌-ರಷ್ಯಾ ಬಿಕ್ಕಟ್ಟನ್ನು ಕೊನೆಗಾಣಿಸಲು ಭಾರತ ಮಧ್ಯಸ್ಥಿಕೆ ವಹಿಸುವುದಾದರೆ ಅದಕ್ಕೆ ಸ್ವಾಗತ. ಭಾರತವು ರಷ್ಯಾದ ಪ್ರಮುಖ ಸ್ನೇಹಿತ. ಜತೆಗೆ ಉಕ್ರೇನ್‌ ಹಾಗೂ ರಷ್ಯಾ ಜತೆಗೆ ಹಲವಾರು ವ್ಯವಹಾರಗಳಲ್ಲಿ ಭಾಗಿದಾರ.

ಭಾರತವು ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವುದಾದರೆ ಅದನ್ನು ರಷ್ಯಾ ಸ್ವಾಗತಿಸುತ್ತದೆ. ಪಾಶ್ಚಾತ್ಯ ರಾಷ್ಟ್ರಗಳು ಮರೆತುಹೋದ ಜವಾಬ್ದಾರಿಯುತ ವರ್ತನೆಯನ್ನು ಭಾರತ ತೋರ್ಪಡಿಸುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.

ವ್ಯಾಪಾರಕ್ಕೆ ಸದಾ ಸಿದ್ಧ
ರಷ್ಯಾದಿಂದ ಯಾವುದೇ ಸಾಮಗ್ರಿಗಳನ್ನು ಯಾವುದೇ ಕ್ಷಣದಲ್ಲಿ ಭಾರತ ಖರೀದಿಸಲು ಬಯಸಿದರೂ ರಷ್ಯಾ ಸದಾ ಸಿದ್ಧವಿರುತ್ತದೆ ಎಂದೂ ರಷ್ಯಾ ಸಚಿವ ಸರ್ಗಿ ಆಶ್ವಾಸನೆ ನೀಡಿ ದ್ದಾರೆ.

ಇದೇ ವೇಳೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಅವರು ಮನಸಾರೆ ಶ್ಲಾಘಿಸಿದ್ದಾರೆ.

ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...