Monday, December 15, 2025
Monday, December 15, 2025

ಮಕ್ಕಳು ಮನಸ್ಸನ್ನು ನಿಯಂತ್ರಿಸಿ ಪಾಠ ಕಲಿಯಬೇಕು- ಮೋದೀಜಿ

Date:

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು‌ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೈಸೂರಿನಿಂದ ಏಕೈಕ ವಿದ್ಯಾರ್ಥಿಯಾಗಿ ಭಾಗವಹಿಸಿದ್ದ ಜಿಲ್ಲೆಯ ದೊಡ್ಡ ಮಾರನಗೌಡನಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ಎಂ.ಬಿ. ತರುಣ್ ಅವರು ಶುಕ್ರವಾರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನ್‌ಲೈನ್ ಪಾಠದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಿದರು.

ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ ನೀಡಿದರು.

ಆಫ್‌ಲೈನ್ ಪಾಠಕ್ಕಿಂತ ಆನ್‌ಲೈನ್ ಪಾಠ ಎಷ್ಟು ಮುಖ್ಯ ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆಫ್‌ಲೈನ್ ತರಗತಿ ಒಂದು ನಿಗದಿತ ಸ್ಥಳದಲ್ಲಿ ಮಾತ್ರ ಕಲಿಯಲು ಅವಕಾಶ. ಆದರೆ ಆನ್‌ಲೈನ್ ತರಗತಿಯಿಂದ ಯಾವಾಗ, ಎಲ್ಲಿಬೇಕಾದರೂ ಕಲಿಯಬಹುದು ಎಂದರು.

ಬೃಹತ್ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಮೋದಿ ಜೊತೆಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಮಕ್ಕಳ ಕಲಿಕೆ, ಪರೀಕ್ಷಾ ಫೋಬಿಯಾ ತಪ್ಪಿಸಲು ಕಾರ್ಯಕ್ರಮ ಸಹಕಾರಿ ಆಗಿತ್ತು, ಪರೀಕ್ಷೆ ಒತ್ತಡ ಕಡಿಮೆ ಮಾಡಲು ಪ್ರಧಾನಿಗಳ ಉತ್ತರ ಸಹಕಾರಿ ಆಗಿತ್ತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...