Thursday, July 9, 2026
Thursday, July 9, 2026

ಹಿಂದುತ್ವ ಬಲಗೊಳ್ಳಬೇಕಾದರೆ ಅಸ್ಪೃಶ್ಯತೆ ತೊಲಗಬೇಕು

Date:

ಜಾತೀಯತೆಯ ಬೇಧದಿಂದ ಮತಾಂತರ ಪಿಡುಗು ತಲೆದೋರಿದೆ. ಅಸ್ಪೃಶ್ಯತೆ ತೊಲಗಿ ನಾವೆಲ್ಲರೂ ಒಂದು ಎಂಬ ಭಾವ ಮೂಡಿದಾಗ ಹಿಂದುತ್ವ ಬಲಗೊಳ್ಳುತ್ತದೆ ಎಂದು ಪರ್ಯಾವರಣ ಸಂರಕ್ಷಣೆ ಗತಿವಿಧಿಯ ರಾಜ್ಯ ಘಟಕದ ಸಂಚಾಲಕ ಜಯರಾಮ ಬೊಳ್ಳಾಜಿ ಎಂದು ತಿಳಿಸಿದರು.

ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಯುಗಾದಿ ಉತ್ಸವ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಪರಿಸರದ ವಿರುದ್ಧ ಮನುಷ್ಯ ಹೋದ ಕಾರಣಕ್ಕೆ ಎರಡು ವರ್ಷ ವಿಪ್ಲವ ಅನುಭವಿಸಬೇಕಾಯಿತು.
ಪರಿಸರಕ್ಕೆ ಪೂರಕವಾಗಿ ಬದುಕುವುದನ್ನು ಕಲಿಯಿರಿ ಎಂದರು.

ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಭಗವದ್ಗೀತೆ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಅದರ ಚಿಂತನೆಗಳು ಸಾರ್ವಕಾಲಿಕ, ಸರ್ವಹಿತದಿಂದ ಕೂಡಿದೆ ಎಂದರು.

ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ, ಜಾತೀಯತೆಯ ರೋಗದಿಂದ ಹೊರಬೇಕಾಗಿದೆ. ಧರ್ಮ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗಬೇಕು ಎಂದರು.

ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಕೃಷ್ಣಾನಂದ ಕೊಡಿಯಾ, ಗೌರವಾಧ್ಯಕ್ಷ ಎಂ.ಎಂ.ಭಟ್ ಕಾರೆಕೊಪ್ಪ, ಸಂಚಾಲಕ ಗೋಪಾಲ ದೇವಾಡಿಗ, ಸಲಹೆಗಾರ ರಮೇಶ ದುಬಾಶಿ, ದೀಪಾ ಮಹಾಲಿಂಗಣ್ಣನವರ ಇದ್ದರು.

ಮಾರಿಕಾಂಬಾ ಹೈಸ್ಕೂಲ್ ಮೈದಾನದಿಂದ ಮಾರಿಕಾಂಬಾ ದೇವಸ್ಥಾನದವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು. 25ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ಬ್ರಹ್ಮಶ್ರೀ ನಾರಾಯಣಗುರು, ಡಾ.ಶಿವಕುಮಾರ ಸ್ವಾಮೀಜಿ ಅವರ ಸ್ತಬ್ಧಚಿತ್ರಗಳು ಸಾಮಾಜಿಕ ಸಂದೇಶ ಸಾರಿದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...