Friday, August 14, 2026
Friday, August 14, 2026

ಬ್ರಿಟನ್ ಪ್ರಧಾನಿ ಜಾನ್ಸನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ

Date:

ಭಾರತ, ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಈ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ 2 ಬಾರಿ ಜಾನ್ಸನ್ ಭಾರತ ಭೇಟಿಯನ್ನು ರದ್ದುಗೊಳಿಸಿದ್ದರು.

ಪ್ರಸ್ತುತ ಸಮಯದಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 22 ರ ಸುಮಾರಿಗೆ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.
ಕಳೆದ ತಿಂಗಳು ಜಾನ್ಸನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಸಂಭಾಷಣೆ ನಡೆಸಿ ಪ್ರವಾಸದ ಅವಧಿಯನ್ನು ನಿಗದಿ ಪಡಿಸಿದ್ದಾರೆ.

ಆದರೆ, ಇದುವರೆಗೂ ಬ್ರಿಟನ್‍ನ ಪ್ರಧಾನಿ ಕಚೇರಿ ಮೂಲಗಳು ಅಧಿಕೃತವಾದ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ.

ಈ ಕುರಿತು ಡೌನಿಂಗ್ ಸ್ಟ್ರೀಟ್‍ನ ವಕ್ತಾರರು ಮಾರ್ಚ್ 22ರಂದು ಹೇಳಿಕೆ ನೀಡಿ, ಉಭಯ ದೇಶಗಳ ನಾಯಕರು ಪರಸ್ಪರ ವೈಯಕ್ತಿಕವಾಗಿ ಭೇಟಿಯಾಗುವುದು ಹಾಗೂ ಮತ್ತಷ್ಟು ಸಂವೃದ್ದ, ಬಲವಾದ ಸಂಬಂಧ ಸುಧಾರಣೆಗೆ ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದ್ದರು.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಗ್ಲಾಸ್ಗೋದಲ್ಲಿ ನಡೆದ ಕಾಪ್ 26 ಹವಾಮಾನ ಶೃಂಗಸಭೆಯ ವೇಳೆಯಲ್ಲಿ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು. ವಿಶ್ವ ನಾಯಕರ ಶೃಂಗಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆಗಳು ಭಾರತ,ಬ್ರಿಟನ್ ಹವಾಮಾನ ಪಾಲುದಾರಿಕೆ ಮಾರ್ಗಸೂಚಿಯ ಮೇಲೆ ಕೇಂದ್ರಿಕರಿಸಿದವು.

2030 ರ ವೇಳೆಗೆ ಭಾರತ ಮತ್ತು ಬ್ರಿಟನ್ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯೊಂದಿಗೆ ಪ್ರಯತ್ನಗಳು ಮುಂದುವರೆದಿವೆ. ಪ್ರವರ್ಧಮಾನಕ್ಕೆ ಬರುತ್ತಿರುವ ಭಾರತದ ಆರ್ಥಿಕತೆಯಿಂದ ಬ್ರಿಟನ್‍ನ ವ್ಯವಹಾರಗಳು, ಕಾರ್ಮಿಕರು ಮತ್ತು ಗ್ರಾಹಕರಿಗೆ ಭಾರಿ ಪ್ರಯೋಜನವಾಗಲಿದೆ ಎಂದು ಈ ವರ್ಷದ ಆರಂಭದಲ್ಲಿ ಜಾನ್ಸನ್ ಅವರು ಹೇಳಿದ್ದರು.

ಈ ನಿಟ್ಟಿನಲ್ಲಿ ಮತ್ತಷ್ಟು ಮುಕ್ತ ಮಾತುಕತೆಗೆ ಬ್ರಿಟನ್ ಪ್ರಧಾನಿ ಭಾರತಕ್ಕೆ ಆಗಮಿಸುತ್ತಿದ್ದಾರೆ.

ಬ್ರಿಟನ್ ವಿಶ್ವ ದರ್ಜೆಯ ವ್ಯವಹಾರಗಳು ಮತ್ತು ಪರಿಣತಿಯನ್ನು ಹೊಂದಿದೆ, ಸ್ಕಾಚ್ ವಿಸ್ಕಿ ಡಿಸ್ಟಿಲರ್ ಗಳಿಂದ ಹಣಕಾಸು ಸೇವೆಗಳು ಮತ್ತು ಅತ್ಯಾಧುನಿಕ ನವೀಕರಿಸಬಹುದಾದ ತಂತ್ರಜ್ಞಾನದವರೆಗೆ ನಾವು ಹೆಮ್ಮೆಪಡಬಹುದು. ಜಾಗತಿಕ ಮಟ್ಟದಲ್ಲಿ ನಮ್ಮ ಸ್ಥಾನವನ್ನು ಭದ್ರಪಡಿಸಲು, ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಇಂಡೋ-ಪೆಸಿಫಿಕ್ ಆರ್ಥಿಕತೆಯಲ್ಲಿ ಅವಕಾಶಗಳನ್ನು ಅನ್ವೇಷಿಸಲಾಗುತ್ತಿದೆ ಎಂದು ಅವರ ಜನವರಿ ತಿಂಗಳಲ್ಲಿ ಹೇಳಿದ್ದರು.

ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರು ಕಳೆದ ವಾರ ದೆಹಲಿಗೆ ಭೇಟಿ ನೀಡಿ ಭಾರತ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‍ರೊಂದಿಗೆ ಮಾತುಕತೆ ನಡೆಸಿದರು.
ಈ ತಿಂಗಳ ಕೊನೆಯಲ್ಲಿ ಭಾರತ ಆಯೋಜಿಸಲಿರುವ ಮೂರನೇ ಸುತ್ತಿನ ಭಾರತ-ಬ್ರಿಟನ್ ಎಫ್‍ಟಿಎ ಮಾತುಕತೆಗಳು ಪ್ರಧಾನ ಮಂತ್ರಿಯ ಭೇಟಿಯ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...