Friday, April 17, 2026
Friday, April 17, 2026

ಸ್ನಾತಕ ಪದವಿ ಅಧ್ಯಯನಕ್ಕೂ ಪ್ರವೇಶ ಪರೀಕ್ಷೆ?

Date:

ಉನ್ನತ ಶಿಕ್ಷಣಕ್ಕೆ ತಳಹದಿ ಹಾಗೂ ವೃತ್ತಿಪರ ಕೋರ್ಸ್​ಗಳಿಗೆ ದಿಕ್ಸೂಚಿಯಾಗಬೇಕಾದ ಪಿಯುಸಿ ವ್ಯಾಸಂಗ ಸದ್ದಿಲ್ಲದಂತೆ ಮಹತ್ವ ಕಳೆದುಕೊಳ್ಳುವಂತಹ ವಾತಾವರಣ ಗೋಚರಿಸಿದೆ.

ಪದವಿ ಪ್ರವೇಶಕ್ಕೂ ಇನ್ಮುಂದೆ ರಾಷ್ಟ್ರೀಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಜಾರಿಯಾಗುತ್ತಿದೆ.
ಇದರಿಂದ ಡಿಗ್ರಿ ಪ್ರವೇಶಾತಿ ವೇಳೆ ಪಿಯುಸಿ ಅಂಕಗಳ ಮಹತ್ವ ಕಳೆದುಕೊಳ್ಳುವಂತಾಗಿದೆ.

ಹೀಗಾಗಿ, ಪ್ರವೇಶ ಪರೀಕ್ಷೆಗಳ ಭರಾಟೆಯಲ್ಲಿ ಪಿಯುಸಿ ಮೌಲ್ಯ ಕಳೆದು ಹೋಗುತ್ತಿದೆಯೇ? ಎರಡು ವರ್ಷಗಳ ಕೋರ್ಸ್ ನಿಷ್ಪಯೋಜಕವೇ? ಎಂಬ ಚರ್ಚೆ ಶೈಕ್ಷಣಿಕ ವಲಯದಲ್ಲಿ ಶುರುವಾಗಿದೆ.

ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ ಪ್ರವೇಶ ಪರೀಕ್ಷೆ-ಸಿಯುಇಟಿಗೆ ರಾಜ್ಯದ ಸರ್ಕಾರಿ ವಿವಿಗಳು ಸಮ್ಮತಿಸುತ್ತಿವೆ. ಈ ವ್ಯವಸ್ಥೆ ಜಾರಿಯಾದರೆ ಸರ್ಕಾರಿ ಕಾಲೇಜುಗಳು, ವಿವಿಗಳಲ್ಲಿ ಪಿಯು ಅಂಕಗಳ ಆಧಾರದ ಮೇಲೆ ಸೀಟು ಗಿಟ್ಟಿಸಿಕೊಳ್ಳುವ ವ್ಯವಸ್ಥೆ ಕೊನೆಗೊಳ್ಳಲಿದೆ.

ಸಿಇಟಿ, ಜೆಇಇ, ನೀಟ್ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳೇ ಮುಖ್ಯವಾಗಲಿವೆ.
ಬಿಎ, ಬಿಕಾಂ ಹಾಗೂ ಬಿಎಸ್​ಸಿಯಂತಹ ತಾಂತ್ರಿಕೇತರ ಶಿಕ್ಷಣಕ್ಕೂ ಕೇಂದ್ರ ಸರ್ಕಾರ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿದೆ. ಸೆಂಟ್ರಲ್ ಯುನಿವರ್ಸಿಟಿ ಎಂಟ್ರೆನ್ಸ್ ಎಕ್ಸಾಂ (ಸಿಯುಇಟಿ) ಮಾದರಿಯನ್ನು ರಾಜ್ಯ ಸರ್ಕಾರಿ ಅಧೀನದ, ಖಾಸಗಿ ಹಾಗೂ ಡೀಮ್ಡ್ ವಿವಿಗಳಿಗೂ ವಿಸ್ತರಿಸಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಕಾರ್ಯತತ್ಪರವಾಗಿದೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಅಧೀನದ 25 ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಯುಜಿಸಿ ಸಂವಾದ ನಡೆಸಿದೆ. ಇದರಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಸಿಯುಇಟಿ ಪ್ರಕ್ರಿಯೆ ಮೂಲಕ ಪದವಿ ಕೋರ್ಸ್​ಗಳ ಪ್ರವೇಶಕ್ಕೆ ಬೆಂಬಲ ವ್ಯಕ್ತವಾಗಿದೆ.

ಜತೆಗೆ, ಬಿಎ, ಬಿಕಾಂ ಹಾಗೂ ಬಿಎಸ್​ಸಿ ಹಾಗೂ ಇದೇ ಮಾದರಿಯ ಇತರ ಕೋರ್ಸ್​ಗಳಿಗೂ ಸಿಯುಇಟಿ ಅಂಕಗಳನ್ನು ಪರಿಗಣಿಸಲು ಸಮ್ಮತಿಸಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶಕುಮಾರ್ ಅವರು ತಿಳಿಸಿದ್ದಾರೆ.

ಎನ್​ಸಿಇಆರ್​ಟಿ ಪಠ್ಯಕ್ರಮದ ಆಧಾರದಲ್ಲಿ ನಡೆಸಲಾಗುವ ಈ ಪರೀಕ್ಷೆಯನ್ನು ಸದ್ಯ ತಾಂತ್ರಿಕೇತರ ಕೋರ್ಸ್​ಗಳಿಗೆ ಪರಿಗಣಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ತುಳಸಿಮಾಲಾ ಅವರು ತಿಳಿಸಿದ್ದಾರೆ.

ಇದು ಆರಂಭಿಕ ಹಂತದಲ್ಲಿದ್ದು, ಆಯಾ ವಿಶ್ವವಿದ್ಯಾಲಯಗಳು ಡೀನ್, ಅಕಾಡೆಮಿಕ್ ಕೌನ್ಸಿಲ್ ಮಟ್ಟದಲ್ಲಿ ಈ ಪ್ರಸ್ತಾವನೆಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕಾಗಿದೆ.
ಯಾವುದೇ ಹೊಸ ಪ್ರಸ್ತಾವನೆಗೆ ಸಾಧಕ-ಬಾಧಕಗಳು ಇದ್ದೇ ಇರುತ್ತವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಇಟಿಯನ್ನು ಇನ್ನೂ ಆಫ್​ಲೈನ್ ಮೋಡ್​ನಲ್ಲಿ ನಡೆಸಲಾಗುತ್ತದೆ. ಆದರೆ ನೀಟ್, ಜೆಇಇ ಮೇನ್ ಪರೀಕ್ಷೆಗಳು ಆನ್​ಲೈನ್ ಮೋಡ್​ನಲ್ಲಿ ಕಂಪ್ಯೂಟರ್ ಆಧಾರಿತವಾಗಿರುತ್ತವೆ. ರಾಜ್ಯದ ಅಭ್ಯರ್ಥಿಗಳಿಗೆ ಇದೊಂದು ಹಿನ್ನಡೆಯಾಗಿ ಸದಾ ಕಾಡುತ್ತಿದೆ.

ಇನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಂತೂ ಇಂಥದ್ದೊಂದು ಪೈಪೋಟಿಗೆ ಸಜ್ಜಾಗಿರುವುದಿಲ್ಲ. ಹೀಗಾಗಿ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನು ತಾಂತ್ರಿಕೇತರ ಪದವಿ ಕೋರ್ಸ್​ಗಳಿಗೂ ಪ್ರವೇಶ ಪರೀಕ್ಷೆಯಾದರೆ, ಉನ್ನತ ಶಿಕ್ಷಣವೇ ಕೈತಪ್ಪುವ ಆತಂಕ ಕಾಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...