Sunday, October 6, 2024
Sunday, October 6, 2024

ತಾಲ್ಲೂಕಿಗೊಂದು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಸ್ವಾವಲಂಬಿ ಜೀವನ ನಡೆಸಲು ಬಯಸುವ ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ಪ್ರತಿ ತಾಲ್ಲೂಕಿಗೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ನೆರವಾಗಲೆಂದು ಪ್ರತಿ ತಾಲೂಕಿಕೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ತಿಂಗಳೊಳಗೆ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...