Saturday, June 6, 2026
Saturday, June 6, 2026

ತಾಲ್ಲೂಕಿಗೊಂದು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಸ್ವಾವಲಂಬಿ ಜೀವನ ನಡೆಸಲು ಬಯಸುವ ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ಪ್ರತಿ ತಾಲ್ಲೂಕಿಗೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ನೆರವಾಗಲೆಂದು ಪ್ರತಿ ತಾಲೂಕಿಕೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ತಿಂಗಳೊಳಗೆ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...