Tuesday, August 25, 2026
Tuesday, August 25, 2026

ತಾಲ್ಲೂಕಿಗೊಂದು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ-ಬೊಮ್ಮಾಯಿ

Date:

ರಾಜ್ಯ ಸರ್ಕಾರವು ಎಸ್ ಸಿ/ಎಸ್ ಟಿ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಸ್ವಾವಲಂಬಿ ಜೀವನ ನಡೆಸಲು ಬಯಸುವ ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ಪ್ರತಿ ತಾಲ್ಲೂಕಿಗೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯದ ಯುವ ಜನತೆಗೆ ನೆರವಾಗಲೆಂದು ಪ್ರತಿ ತಾಲೂಕಿಕೊಂದು ಬಾಬು ಜಗಜೀವನ್ ರಾಂ ಸ್ವಯಂ ಉದ್ಯೋಗ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ತಿಂಗಳೊಳಗೆ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...