Tuesday, August 25, 2026
Tuesday, August 25, 2026

ಆಡಳಿತಕ್ಕೆ ರೀತಿ ನೀತಿಗಳಿವೆ, ಅದರಂತೆ ನಮ್ಮ ಆಡಳಿತ-ಬೊಮ್ಮಾಯಿ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಹಲಾಲ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಅವರು ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು ಧಾರ್ಮಿಕ ವಿಚಾರವಾಗಿದೆ. ಕಾನೂನು ಎಲ್ಲರಿಗೂ ಒಂದೇ, ಕಾನೂನಿಗೆ ಎಲ್ಲರೂ ತಲೆಬಾಗಿ ನಡೆಯಲೇಬೇಕು. ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪ್ರಾಮುಖ್ಯತೆ ನೀಡುತ್ತದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸಮಾಜದಲ್ಲಿ ಶಾಂತಿ ಕೆಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಮಾನ್ಯ ಮುಖ್ಯಮಂತ್ರಿ ಅವರು, ಕುಮಾರಸ್ವಾಮಿ ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ತೀರ್ಮಾನಿಸುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಹಲವಾರು ವಿಚಾರಗಳು ಬಂದಾಗ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದೇವೆ. ಹೇಳಿಕೆ ಕೊಟ್ಟರಷ್ಟೇ ಆಡಳಿತ ಅಲ್ಲ. ಆಡಳಿತ ಮಾಡಲು ರೀತಿ ನೀತಿಗಳಿವೆ. ಅದರಂತೆ ನಾವು ಆಡಳಿತ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...