Monday, August 10, 2026
Monday, August 10, 2026

ಆಡಳಿತಕ್ಕೆ ರೀತಿ ನೀತಿಗಳಿವೆ, ಅದರಂತೆ ನಮ್ಮ ಆಡಳಿತ-ಬೊಮ್ಮಾಯಿ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಹಲಾಲ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಅವರು ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು ಧಾರ್ಮಿಕ ವಿಚಾರವಾಗಿದೆ. ಕಾನೂನು ಎಲ್ಲರಿಗೂ ಒಂದೇ, ಕಾನೂನಿಗೆ ಎಲ್ಲರೂ ತಲೆಬಾಗಿ ನಡೆಯಲೇಬೇಕು. ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪ್ರಾಮುಖ್ಯತೆ ನೀಡುತ್ತದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸಮಾಜದಲ್ಲಿ ಶಾಂತಿ ಕೆಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಮಾನ್ಯ ಮುಖ್ಯಮಂತ್ರಿ ಅವರು, ಕುಮಾರಸ್ವಾಮಿ ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನ ತೀರ್ಮಾನಿಸುತ್ತಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಹಲವಾರು ವಿಚಾರಗಳು ಬಂದಾಗ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದೇವೆ. ಹೇಳಿಕೆ ಕೊಟ್ಟರಷ್ಟೇ ಆಡಳಿತ ಅಲ್ಲ. ಆಡಳಿತ ಮಾಡಲು ರೀತಿ ನೀತಿಗಳಿವೆ. ಅದರಂತೆ ನಾವು ಆಡಳಿತ ಮಾಡುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...