Tuesday, April 29, 2025
Tuesday, April 29, 2025

ಬುಚಾ ನಗರದ ಮೇಲೆ ರಷ್ಯದ ದಾಳಿ, ಸರಣಿ ಸಾವುಗಳನ್ನ ಭಾರತ ಖಂಡಿಸುತ್ತದೆ

Date:

ಜಾಗತಿಕವಾಗಿ ಅಥವಾ ರಾಷ್ಟ್ರಮಟ್ಟದಲ್ಲಿ ಯಾವುದೇ ರೀತಿಯ ಸಂಕೀರ್ಣ ಪರಿಸ್ಥಿತಿ ಎದುರಾದಾಗ ಪ್ರತಿ ದೇಶಗಳೂ ತಮ್ಮದೇ ಆದ ಒಂದು ನೀತಿಯನ್ನು ಅಳವಡಿಸಿಕೊಳ್ಳುತ್ತವೆ. ಅದು ಆಯಾ ದೇಶದ ಜನರ ಸುರಕ್ಷತೆಗೆ ಪೂರಕವಾಗಿರುವಂಥದ್ದಾಗಿರುತ್ತದೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ.

ರಷ್ಯಾ ಉಕ್ರೇನ್​ ಮೇಲೆ ಯುದ್ಧ ಸಾರಿ 39ದಿನಗಳೇ ಕಳೆದು ಹೋಗಿವೆ. ಅಲ್ಲಿನ ಪರಿಸ್ಥಿತಿ ಭೀಕರ. ರಷ್ಯಾ ಸೈನಿಕರಿಗೆ ಉಕ್ರೇನ್​ ಸೇನೆ, ನಾಗರಿಕರು, ಬೇರೆ ದೇಶಗಳ ಕೆಲವು ಸ್ವಯಂಸೇವಕರು ತೀವ್ರ ಪ್ರತಿರೋಧವನ್ನೂ ಒಡ್ಡುತ್ತಿದ್ದಾರೆ.

ಹೀಗಿದ್ದೂ, ಉಕ್ರೇನ್​ನಲ್ಲಿ ಆಗುತ್ತಿರುವ ಹಾನಿ, ನಷ್ಟ ಅಪಾರ. ಅದರಲ್ಲೂ ಕೀವ್​​ನಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ಬುಚಾ ನಗರವಂತೂ ಯುದ್ಧ ಭೀಕರತೆಗೆ ಸಾಕ್ಷಿಯಾಗಿ ನಿಂತಿದೆ.

ಬಾಂಬ್​, ಶೆಲ್ಲಿಂಗ್​ ದಾಳಿಗೆ ಸುಟ್ಟು ಕರಕಲಾಗಿ ನಿಂತ ವಾಹನಗಳು ಇಲ್ಲಿ ರಸ್ತೆಯುದ್ದಕ್ಕೂ ಕಾಣುತ್ತವೆ. ರಸ್ತೆಯ ಮೇಲೆಲ್ಲ ಹೆಣಗಳು ಬಿದ್ದಿವೆ. ನೀರಿಲ್ಲ, ಗ್ಯಾಸ್​ ಸಂಪರ್ಕವಿಲ್ಲ. ಜನರು ಕಷ್ಟಕ್ಕೆ ಸ್ಪಂದಿಸುವವರಿಲ್ಲದಂತಾಗಿದೆ.

ಇದುವರೆಗೂ ಬುಚಾದಲ್ಲಿ 400ಕ್ಕೂ ಅಧಿಕ ನಾಗರಿಕರ ಹತ್ಯೆಯಾಗಿದ್ದಾಗಿ ವರದಿಯಾಗಿದೆ.

ಬುಚಾ ನಗರದಲ್ಲಿ ನಡೆಯುತ್ತಿರುವ ದಾಳಿ, ಸರಣಿ ಸಾವನ್ನು ಭಾರತದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್ ಖಂಡಿಸಿದ್ದಾರೆ.

ಸಂಸತ್ತಿನಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, ಉಕ್ರೇನ್​ನ ಬುಚಾ ನಗರದಲ್ಲಿ ನಡೆಯುತ್ತಿರುವ ಹತ್ಯೆಯನ್ನು ಭಾರತ ತೀವ್ರವಾಗಿ ವಿರೋಧಿಸುತ್ತದೆ. ಯುದ್ಧದ ಹೆಸರಲ್ಲಿ ನಡೆಯುತ್ತಿರುವ ಈ ಕೊಲೆಗಳ ಬಗ್ಗೆ ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ನಾವು ಆಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್​ ನಡುವಿನ ಮಾತುಕತೆಯನ್ನು ನಾವು ಪ್ರೋತ್ಸಾಹಿಸುತ್ತೇವೆ. ತಕ್ಷಣವೇ ಯುದ್ಧ ನಿಲ್ಲಬೇಕು. ಈ ವಿಚಾರದಲ್ಲಿ ಭಾರತ ಯಾವುದೇ ರೀತಿಯ ಸಹಾಯ ಮಾಡಲು ಸಿದ್ಧ. ಇದನ್ನು ರಷ್ಯಾದ ವಿದೇಶಾಂಗ ಇಲಾಖೆ ಸಚಿವ ಲಾರ್ವೋವ್​ ಭಾರತಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಕೂಡ ಹೇಳಲಾಗಿದೆ ಎಂದು ಜೈಶಂಕರ್​ ತಿಳಿಸಿದರು.

ಬುಚಾದಲ್ಲಿ ನಡೆದ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿ ಟಿ.ಎಸ್.ತಿರುಮೂರ್ತಿಯವರೂ ಖಂಡಿಸಿದ್ದಾರೆ. ಯುಎನ್​​ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಉಕ್ರೇನ್​ನ ಬುಚಾದಲ್ಲಿ ನಡೆಯುತ್ತಿರುವ ನಾಗರಿಕರ ಹತ್ಯೆನ್ನು ನಾವು ಖಂಡಿಸುತ್ತೇವೆ. ಇದನ್ನು ಸ್ವತಂತ್ರ ತನಿಖೆಗೆ ಒಳಪಡಿಸಬೇಕು ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...