Sunday, March 22, 2026
Sunday, March 22, 2026

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಹಿಂಪಡೆಯಲಾಗಿದೆ

Date:

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಅಧ್ಯಕ್ಷ ಗೊಟಬಯ ರಾಜಪಕ್ಸ ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರ ಪುರುಚ್ಚರಿಸಿದೆ.

ಸರ್ಕಾರದ ಮುಖ್ಯ ವಿಪ್​ ಹಾಗು ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಈ ವಿಚಾರವಾಗಿ ಮಾತನಾಡಿದರು.

ದ್ವೀಪರಾಷ್ಟ್ರವು ಆರ್ಥಿಕ ದಿವಾಳಿಯಾಗಿದೆ. ಅಗತ್ಯ ವಸ್ತುಗಳಿಗೆ ನಾಗರಿಕರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಪರಿಣಾಮ, ರಸ್ತೆಗಿಳಿದು ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದು ಹಿಂಸಾಚಾರವೂ ನಡೆದಿತ್ತು.

ಹೀಗಾಗಿ ಏ.1ರಂದು ತುರ್ತು ಪರಿಸ್ಥಿತಿ ಜಾರಿಗೊಳಿಸಿ ಅಧ್ಯಕ್ಷ ಗೊಟಬಯ ರಾಜಪಕ್ಸ ಆದೇಶಿಸಿದ್ದರು. ಇದೀಗ ಇದನ್ನು ಹಿಂಪಡೆದು ಗೆಜೆಟ್​ ಅಧಿಸೂಚನೆ​ ಹೊರಡಿಸಲಾಗಿದೆ.

ಸಂಸತ್ತಿನಲ್ಲಿ ರಾಜಪಕ್ಸ ಸಾರಥ್ಯದ ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನಾ ಪಕ್ಷ (ಎಸ್‌ಎಲ್‌ಪಿಪಿ) ಬಹುಮತ ಕಳೆದುಕೊಂಡಿದೆ. ಆದರೂ, ಅಧ್ಯಕ್ಷರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸರ್ಕಾರದ ಮುಖ್ಯ ವಿಪ್​ ಆಗಿರುವ ಹೆದ್ದಾರಿ ಖಾತೆ ಸಚಿವ ಜಾನ್ಸ್​ಟನ್ ಫೆರ್ನಾಂಡೋ ಅವರು ತಿಳಿಸಿದ್ದಾರೆ.

ರಾಜಪಕ್ಸ ಅವರಿಗೆ 6.9 ಮಿಲಿಯನ್​ ಜನರು ಮತ ಹಾಕಿದ್ದಾರೆ. ಈ ವಿಚಾರವನ್ನು ನಾನು ಸರ್ಕಾರದ ಭಾಗವಾಗಿ ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಪರಿಸ್ಥಿತಿಯಲ್ಲೂ ಅಧ್ಯಕ್ಷರು ರಾಜೀನಾಮೆ ನೀಡುವುದಿಲ್ಲ. ಏನೇ ಆದರೂ ನಾವು ಅದನ್ನು ಎದುರಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...