Tuesday, February 3, 2026
Tuesday, February 3, 2026

ಗರೀಬ್ ಕಲ್ಯಾಣ ಯೋಜನೆ ಐಎಂಎಫ್ ಶ್ಲಾಘನೆ

Date:

ಯೋಜನೆಗಳ ಭರವಸೆಯನ್ನು ಚುನಾವಣಾ ಸಮಯದಲ್ಲಿ ಎಲ್ಲ ಪಕ್ಷಗಳೂ ಕೊಡುತ್ತವೆ. ಬದ್ಧತೆ ತೋರಿಸಲು ಪ್ರಣಾಳಿಕೆಯಲ್ಲಿ ನಮೂದಿಸುತ್ತವೆ. ಹಲವು ಬಾರಿ ಕೆಲವು ಜಾರಿಯಾಗುತ್ತದೆ. ಹಲವು ಮರೆತೇ ಹೋಗಿ ಬಿಡುತ್ತವೆ.
ಆದರೆ, ಜಾರಿಯಾದ ಹಲವು ಕಾರ್ಯಕ್ರಮಗಳು ಅಡಳಿತಶಾಹಿಯ ಹಂತದಲ್ಲಿ ಏನಾದರೂ ದುರ್ಬಲವಾದರೆ
ಉತ್ತಮ ಯೋಜನೆಗಳು ವೈಫಲ್ಯಕಾಣುತ್ತವೆ.

ಈಗ, ಎಪ್ಪತ್ತೈದು ವರ್ಷಗಳ ನಮ್ಮ ರಾಜಕೀಯ ಇತಿಹಾಸದಲ್ಲಿ ಇವೆಲ್ಲವನ್ನೂ
ಜನತೆ ವೀಕ್ಷಿಸುತ್ತಾ ಬಂದಿದೆ.

ಜೀತವಿಮುಕ್ತಿ, ತಲೆಯಮೇಲೆ ಮಲಹೊರುವ ಅಮಾನವೀಯ
ಪದ್ಧತಿಗಳು ತೊಲಗಿವೆ.
ಇಷ್ಟಾದರೂ ಹಸಿವಿನ ಕೂಗು ಅಡಗಿಸುವ
ಬಗ್ಗೆ ಪ್ರಬಲ ಯೋಜನೆಗಳು ನಾಟುವಂತಹ ಕೆಲಸ ಮಾಡಿರಲಿಲ್ಲ.

ಈಗ ಪ್ರಧಾನ ಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆ ಒಂದಿಷ್ಟು ಬಡವರ
ಹೊಟ್ಟೆ ತಣಿಸುವಲ್ಲಿ ಸಾಫಲ್ಯಕಾಣುತ್ತಿದೆ.
ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ
ಭಾರತದ ಈ ಯೋಜನೆಯ ಬಗ್ಗೆ ಒಂದು ವರದಿಯನ್ನೇ ಹೊರತಂದಿದೆ.

ಈ ವರದಿಯ ಪ್ರಕಾರ ಭಾರತದಲ್ಲಿ
142 ರೂಪಾಯಿಗಿಂತ ಕಡಿಮೆ ಸರಾಸರಿ ಆದಾಯ ಇರುವ ಕಡುಬಡವರ ಸಂಖ್ಯೆ ಕೊರೋನಾ ಬಿಕ್ಕಟ್ಟಿನ 2020ರ ವರ್ಷದಲ್ಲಿಯೂ ಕೊರೋನಾ ಪೂರ್ವ 2019ರ ಮಟ್ಟದಲ್ಲಿ ಉಳಿದುಕೊಂಡಿದೆ‌. ಗರೀಬ್ ಕಲ್ಯಾಣ ಯೋಜನೆ ಬಡತನವನ್ನು ದೂರ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

2020 ರ ಮಾರ್ಚ್ ನಲ್ಲಿ ಅನ್ನ ಯೋಜನೆ ಆರಂಭಿಸಿ ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸಲಾಗಿದೆ. 80 ಕೋಟಿ ಜನ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ನೂರ ಮೂವತ್ತು ಕೋಟಿ ಜನಸಂಖ್ಯೆಯಲ್ಲಿ ಎಂಭತ್ತು ಕೋಟಿ ಮಂದಿ ಈ ಯೋಜನೆಯ ಲಾಭ ಪಡೆದಿದ್ದಾರೆ. ಅಕ್ಕಿ ಕೊಟ್ಟು ಜನರನ್ನ ಸೋಮಾರಿಗಳನ್ನಾಗಿ ಮಾಡುತ್ತಿದೆ
ಎಂಬ ಟೀಕೆಯನ್ನೂ ರಾಜ್ಯ ಎದುರಿಸಿತ್ತು.
ಆದರೆ ಬಡವರ ತುತ್ತಿನ ಚೀಲದ ಅಗತ್ಯದ ಬಗ್ಗೆ ಜರೂರು ಇಂತಹ ಕೆಕಸ ಪರಿಹಾರ ನೀಡಬಲ್ಲದು.

ಮುಂದೆ ಅವಲಂಬಿತರಾಗದಂತೆ ಅವರ ಯೋಚನೆಯ ದಿಕ್ಕನ್ನ ಬದಲಿಸುವ
ಯೋಜನೆಗಳನ್ನ ಕೊಡಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...