Monday, December 8, 2025
Monday, December 8, 2025

ದ್ವೇಷಪೂರಿತ ಭಾಷಣ ಹೆಚ್ಚಾಗುತ್ತಿದೆ ರಾಜ್ಯಸಭೆಯಲ್ಲಿ ಕಳವಳ ವ್ಯಕ್ತ

Date:

ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡುವುದು ಹೆಚ್ಚುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ತಿಳಿಸಿದರು.

ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳುವಂತೆ ವಿವಾದಾತ್ಮಕ ಸಂತ ಯತಿ ನರಸಿಂಗಾನಂದ ಅವರು ಹಿಂದೂಗಳಿಗೆ ಕರೆ ನೀಡುತ್ತಿರುವುದು ಕಳವಳಕಾರಿ ಎಂದೂ ಕಾಂಗ್ರೆಸ್‌ ಸದಸ್ಯರು ಹೇಳಿದರು.
ನಿಗದಿತ ಕಲಾಪದ ಬದಲಾಗಿ, ನಿಯಮ 267ರಡಿ ಈ ವಿಷಯ ಕುರಿತು ಪ್ರಸ್ತಾಪಿಸಲು ಅವಕಾಶ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅಲ್ಪಸಂಖ್ಯಾತರ ವಿರುದ್ದದ ದ್ವೇಷ ಭಾಷಣ ಹಾಗೂ ಕೆಲ ಆನ್‌ಲೈನ್‌ ಮಾಧ್ಯಮಗಳ ಪತ್ರಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ನೀಡುವಂತೆಯೂ ಅವರು ನೋಟಿಸ್‌ ನೀಡಿದ್ದರು.

ಈ ಮನವಿಯನ್ನು ತಿರಸ್ಕರಿಸಿದ ಸಭಾಪತಿ ವೆಂಕಯ್ಯ ನಾಯ್ಡು ಅವರು, ‘ಯಾವುದೇ ಸಮುದಾಯದ ಹೆಸರು ಸಹ ಕಡತಕ್ಕೆ ಹೋಗುವುದಿಲ್ಲ. ವ್ಯಕ್ತಿಯೊಬ್ಬ ಅರ್ಥಹೀನ ಪದ ಬಳಸಿ ಮಾತನಾಡಿದ್ದರೆ, ಅದನ್ನು ಇಲ್ಲಿ ಹೇಳಬಾರದು. ಅದನ್ನೇ ಸದನದಲ್ಲಿ ಮತ್ತೆ ಪ್ರಸ್ತಾಪಿಸಿ ಚರ್ಚಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಇದಕ್ಕೆ ಅವಕಾಶ ನೀಡಿಲ್ಲ ಎಂದರು.

ಖರ್ಗೆ ಅವರಲ್ಲದೇ, ಟಿಎಂಸಿಯ ಸುಷ್ಮಿತಾ ದೇವ್, ಲಿಜಿನ್ಹೊ ಫೆಲಿರೊ ಹಾಗೂ ಮೊಹ್ಮದ್ ನದಿಮುಲ್ ಹಕ್ ಅವರು ಸಹ ಈ ಕುರಿತು ಮಾತನಾಡಲು ಅವಕಾಶ ಕೋರಿ ನೋಟಿಸ್‌ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...